ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣ : ಕೋರ್ಟ್‌ ಗೆ ಹಾಜರಾಗಲಿರುವ ದಿ. ಜಯಲಲಿತಾ ಸ್ನೇಹಿತೆ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಶಶಿಕಲಾ‌, ಇಳವರಸಿ ಕೋರ್ಟ್ ಗೆ ಹಾಜರಾಗಲಿದ್ದಾರೆ. ಬೆಂಗಳೂರಿನ ಸಿಸಿಹೆಚ್ ಕೋರ್ಟ್ ಗೆ ಇಂದು ಹಾಜರಾಗಲಿದ್ದಾರೆ.

ಶಶಿಕಲಾ, ಇಳವರಸಿ ಜೈಲಿನಲ್ಲಿದ್ದಾಗ ರಾಜಾತಿಥ್ಯ ಪಡೆದ ಆರೋಪ ಹೊತ್ತಿದ್ದರು. ಈ ಪ್ರಕರಣ ಸಂಬಂಧ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಕೋರ್ಟ್ ಗೆ ಶಶಿಕಲಾ, ಇಳವರಸಿ ಹಾಜರಾಗಲಿದ್ದಾರೆ.

ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ. ಜಯಲಲಿತಾ ಆಪ್ತೆ ಶಶಿಕಲಾ ಜೈಲುವಾಸ ಅನುಭವಿಸಿದ್ದರು. ಪರಪ್ಪನ ಅಗ್ರಹಾರದಲ್ಲಿದ್ದರು. ಈ ವೇಳೆ ಜೈಲಿನಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿತು. ಅದಕ್ಕೆ ಸಂಬಂಧಿಸಿದಂತೆ, ಶಶಕಿಲಾ, ಇಳವರಸಿ ಮತ್ತು ಜೈಲು ಅಧಿಕಾರಿಗಳು ಸೇರಿ 6 ಜನರ ಮೇಲೆ ಜಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ.

ಈ ಸಂಬಂಧ ಎಸಿಬಿ ಅಧಿಜಾರಿಗಳಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು ಈ ವಿಚಾರಣೆ ಕೋರ್ಟ್ ನಲ್ಲಿ ನಡೆಯಲಿದ್ದು, ಶಶಿಕಲಾ ಹಾಜರಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *