Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಳುಗುವ ಹಡಗೋ, ಮುಳುಗಿದ ಹಡಗೋ, ಎದ್ದು ಬರೋ ಸಾಮರ್ಥ್ಯವಿದೆ : ಸಂಸದ ಡಿ ಕೆ ಸುರೇಶ್

Facebook
Twitter
Telegram
WhatsApp

 

ರಾಮನಗರ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲೆಡೆ ಸೋತಿದೆ. ಇದು ರಾಜ್ಯ ಚುನಾವಣಾ ಮೇಲೂ ಪರಿಣಾಮ ಬೀರಬಹುದಾ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಸೋಲಿನ ಬಗ್ಗೆ ಸಂಸದ ಡಿ ಕೆ ಸುರೇಶ್ ಮಾತನಾಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಡಿ ಕೆ ಸುರೇಶ್ ಅವರು, ಚುನಾವಣೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿರುತ್ತೆ. ಸೋಲಿನ ಕಾರಣದ ಬಗ್ಗೆ ನಮ್ಮ ನಾಯಕರು ಚರ್ಚಿಸುತ್ತಾರೆ. ಪಂಜಾಬ್ ನಲ್ಲಿ 6 ತಿಂಗಳಿನಿಂದ ಗೊಂದಲ ಸೃಷ್ಟಿಯಾಗಿತ್ತು. ಪಕ್ಷದ ಕಾರ್ಯಕರ್ತರಲ್ಲೇ ಈ ಗೊಂದಲ ಇತ್ತು. ಹೀಗಾಗಿ ನಮಗೆ ಪಂಜಾಬ್ ರಾಜ್ಯದಲ್ಲಿ ಹಿನ್ನಡೆಯಾಗಿದೆ. ಅದನ್ನ ಸರಿ ಮಾಡುವ ಕೆಲಸ ಆಗುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕುಗ್ಗಿದೆ ಎಂಬುದೆಲ್ಲಾ ಸುಳ್ಳು. 2023ರ ಚುನಾವಣೆಯಲ್ಲಿ ಬದಲಾವಣೆಯಾಗುತ್ತದೆ. ದಕ್ಷಿಣ ಭಾರತ ಚುನಾವಣಾ ರೀತಿ ನೀತಿಯೇ ಬೇರೆ. ಮುಳುಗುವ ಹಡಗೋ, ಮುಳುಗುತ್ತಿರುವ ಹಡಗೋ. ಎದ್ದು ಬರುವ ಸಾಮರ್ಥ್ಯ ಕಾಂಗ್ರೆಸ್ ಗೆ ಇದೆ.

ಐಟಿ, ಸಿಬಿಐ, ಚುನಾವಣಾ ಆಯೋಗದ ದುರ್ಬಳಕೆಯಾಗುತ್ತಿದೆ. ಹೀಗಾಗಿಯೇ ಬಿಜೆಪಿ 4 ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಎಲ್ಲದಕ್ಕೂ ಒಂದು ಅಂತ್ಯ ಅನ್ನೋದು ಇರುತ್ತದೆ ಎಂದು ವಿಜಯಪುರದಲ್ಲಿ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!