Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವಿನಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ : ಅಂತಿಮ ಯಾತ್ರೆ ಬಳಿಕ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ..!

Facebook
Twitter
Telegram
WhatsApp

ಹಾವೇರಿ: ರಷ್ಯಾ ಮತ್ತು ಉಕ್ರೇನ್ ದಾಳಿಯಿಂದಾಗಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿದ್ದ ನವೀನ್ ರಷ್ಯಾ ದಾಳಿಗೆ ಸಾವನ್ನಪ್ಪಿದ್ದರು. ಕಳೆದ 20 ದಿನಗಳಿಂದ ಯುದ್ಧ ನಡೆಯುತ್ತಿದ್ದ ಕಾರಣ ಮೃತದೇಹ ತರಲು ಸಾಧ್ಯವಾಗಿಲ್ಲ. ಆದ್ರೆ ಸರ್ಕಾರ ಕೊಟ್ಟ ಮಾತಂತೆ ನಡೆದುಕೊಂಡಿದೆ.

ಇಂದು ಚಳಗೇರಿಗೆ ನವೀನ್ ಮೃತದೇಹ ತಲುಪಿದೆ. ಬೆಳಗ್ಗೆಯೇ ಮೃತದೇಹ ತಲುಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನವೀನ್ ಮೃತದೇಹ ನೋಡಿ ತಂದೆ ತಾಯಿ, ಸಹೋದರ ಕಣ್ಣೀರಲ್ಲೇ ಮುಳುಗಿದ್ದಾರೆ.

 

ನವೀನ್ ಮೃತದೇಹ ಬಂದ ಕೂಡಲೇ ಚಳಗೇರಿಗೆ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಿದ್ದರು. ಮೃತದೇಹದ ಅಂತಿಮ ದರ್ಶನ ಪಡೆದಿದ್ದಾರೆ, ಸಿಎಂ ಬೊಮ್ಮಾಯಿ ಅವರು.

ಇನ್ನು ಮಧ್ಯಾಹ್ನ 3 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಿದ್ದಾರೆ. ಚಳಗೇರಿ ಬಸ್ ನಿಲ್ದಾಣದವರೆಗೂ ಮೆರವಣಿಗೆ ನಡೆಯಲಿದೆ. ಬಳಿಕ ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನ ಕುಟುಂಬಸ್ಥರು ದಾನ ಮಾಡಲಿದ್ದಾರೆ. ಕಳೆದ 20 ದಿನದಿಂದ ಹಿಡಿದಿಟ್ಟುಕೊಂಡಿದ್ದ ನೋವಿನ ಕಟ್ಟೆ ಹೊಡೆದಿದೆ. ಆದರೆ ಸಾವಿನಲ್ಲೂ ವಿದ್ಯಾರ್ಥಿಗಳಿಗಾಗಿ ದೇಹದಾನ‌ಮಾಡಿದ್ದಾರೆ. ಮಗ ಕೂಡ ಇದೇ ರೀತಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಹೀಗಾಗಿ ಪ್ರಾಕ್ಟಿಕಲ್ ಬಗ್ಗೆ ಎಲ್ಲಾ ಹೇಳಿಕೊಂಡಿದ್ದರೇನೋ. ಅದಕ್ಕೆ ಈ ನಿರ್ಧಾರಕ್ಕೂ ಕುಟುಂಬ ಬಂದಿರಬಹುದು. ಒಟ್ಟಾರೆ ನವೀನ್ ಸಾವಿನಲ್ಲೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!