Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಸ್ಯೆ ಬಗೆಹರಿಸಬೇಕಾದ ಸಿಎಂ ಸಿನಿಮಾ ಟ್ರೇಲರ್ ಲಾಂಚ್ ಗೆ ಹೋಗ್ತಾರೆ : ಯು ಟಿ ಖಾದರ್ ಕಿಡಿ

Facebook
Twitter
Telegram
WhatsApp

ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟೆ ಬಳಿ ಬಸ್ ದುರಂತ ಪ್ರಕರಣವನ್ನ ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಯು ಟಿ ಖಾದರ್ ಪ್ರಸ್ತಾಪ ಮಾಡಿದ್ದಾರೆ.

ಬಸ್ಸಿನ ಟಾಪ್ ನಲ್ಲಿ ಕುಳಿತು ಪ್ರಯಾಣಿಸುವಂತ ಸ್ಥಿತಿ ಬಂದಿದ್ದೇಕೆ..? ಸರ್ಕಾರಿ ಬಸ್ ಗಳ ಸಂಚಾರ ಕಡಿಮೆಯಾಗಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ವ್ಯವಸ್ಥೆ ಸರಿಪಡಿಸುವ ಜವಬ್ದಾರಿ ಸರ್ಕಾರದ ಮೇಲಿದೆ. ಸಮಿತಿ ರಚನೆ ಮಾಡಿ ಸರ್ಕಾರದ ವರದಿ ಪಡೆಯಬೇಕಿದೆ. ಅಪಘಾತದಲ್ಲಿ ಮೃತರಾದವರ ಪರಿಹಾರ ಹೆಚ್ಚಿಸಬೇಕೆಂದು ಯು ಟಿ ಖಾದರ್ ಒತ್ತಾಯಿಸಿದ್ದಾರೆ.

ಸಮಸ್ಯೆ ಬಗೆಹರಿಸಬೇಕಿರುವ ಸಿಎಂ ಬೊಮ್ಮಾಯಿ ಅವರು, ಸಿನಿಮಾ ಟ್ರೇಲರ್ ರಿಲೀಸ್ ಗೆ ಹೋಗಿದ್ದಾರೆಂದು ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಉತ್ತರ ಕೊಟ್ಟಿದ್ದು, ಉನ್ನತಮಟ್ಟದ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದೆ. ಅಪಘಾತ ಆಗಿರುವಂತ ಸ್ಥಳವನ್ನು ಬ್ಲಾಕ್ ಸ್ಪಾಟ್ ಎಂದು ಪರಿಗಣಿಸಲಾಗಿದೆ. ಅಪಘಾತಕ್ಕೆ ಕಾರಣ ಯಾರು ಎಂಬುದನ್ನು ಚರ್ಚೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡಲಾಗಿದೆ. ಅಷ್ಟೇ ಅಲ್ಲ ವೈಯಕ್ತಿಕವಾಗಿ ನಾನೂ ಕೂಡ 1 ಲಕ್ಷ ಸಹಾಯ ಮಾಡಿದ್ದೇನೆ. ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲಾಗಿದೆ. ಅಧಿಕಾರಿಗಳಿಗೆ ಸರ್ಕಾರಿ ಬಸ್ ಬಿಡುವಂತೆ ಸೂಚನೆ ನೀಡಲಾಗಿದೆ ಎಂದಿದ್ಸಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!