Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧರ್ಮಗಳ‌ ಮಧ್ಯೆ ಕಿಚ್ಚೆಬ್ಬಿಸುತ್ತಿದ್ದಾರೆ : ನಿಖಿಲ್ ಆಕ್ರೋಶ

Facebook
Twitter
Telegram
WhatsApp

 

ಮಂಡ್ಯ : ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಧರ್ಮದ ವಿಚಾರ, ಹಿಜಾಬ್ ವಿಚಾರ, ಮುಸ್ಲಿಂ ಸಮುದಾಯದ ವ್ಯಾಪಾರ ನಿಷೇಧ ವಿಚಾರ ಸಾಕಷ್ಟು ಸದ್ದು ಮಾಡುತ್ತಲೆ ಇದೆ. ಭಜರಂಗದಳದವರು ಮುಸ್ಲಿಂ ಸಮುದಾಯದ ವ್ಯಾಪಾರ ನಿಷೇಧ ಮಾಡಿದ್ರೆ, ಹಲಾಲ್ ಇರುವ ಅಂಗಡಿಗಳಲ್ಲಿ ಮಾಂಸ ಖರೀದಿ ಮಾಡಬೇಡಿ ಅಂತ ಬಿಜೆಪಿಯ ಹಲವು ನಾಯಕರು ಹೇಳಿಕೆ ಕೊಡುತ್ತಿದ್ದಾರೆ.

ಈ ಬಗ್ಗೆ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಕಳೆದ ಎರಡ್ಮೂರು ತಿಂಗಳಿನಿಂದ ಧರ್ಮ ಧರ್ಮಗಳ ಮಧ್ಯೆ ಎರಡು ರಾಷ್ಟ್ರೀಯ ಪಕ್ಷಗಳು ಕಿಚ್ಚೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೆಲ್ಲಾ ಬಿಟ್ಟು ನಾವೆಲ್ಲಾ ಅಣ್ಣ ತಮ್ಮಂದಿರ ರೀತಿಯಲ್ಲಿ ಬಾಳಬೇಕಾಗಿರುವುದು ನಮ್ಮ ಧರ್ಮ ಮತ್ತು ಕರ್ತವ್ಯ. ಜನ ಲೂಡ ಇದನ್ನ ಬಹಳ ಸೂಕ್ಷ್ಮವಾಗಿ ಗಮನಿಸ್ತಾ ಇದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತವಾದ ದಿನಗಳಲ್ಲೇ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಇನ್ನು ಮುಂದಿನ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಮಾತನಾಡಿ, 2024 ಇನ್ನು ದೂರದ ಮಾತು. ಸದ್ಯಕ್ಕೆ ಒಂದು ವರ್ಷದ ವಿಧಾನಸಭಾ ಚುನಾವಣೆ ಇದೆ. ಪಕ್ಷ ನಂಗೆ ಜವಬ್ದಾರಿ ಕೊಟ್ಟಿದೆ. ಸಂಘಟನೆ ಮಾಡುವ ಹೊರೆ ನನ್ನ ಮೇಲಿದೆ. ಅದನ್ನ ಮುಂದುವರೆಸುತ್ತೇನೆ. ರಾಮನಗರವಾಲಿ, ಮಂಡ್ಯವಾಗಲಿ, ಇನ್ನೊಂದಾಗಲಿ ನಾನು ವೈಯಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳುವಂತದ್ದು ಸೂಕ್ತ ಅಲ್ಲ. ಇಲ್ಲಿ ಪಕ್ಷ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಾನು ಎಲ್ಲಿ ನಿಲ್ಲುತ್ತೇನೆ ಎಂಬುದು ಮುಖ್ಯ ಅಲ್ಲ. ನಾನು ಪಕ್ಷ ಸಂಘಟನೆ ಮಾಡೋದು ಮುಖ್ಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!