Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ತ್ಯಾಗ, ಪರಿಶ್ರಮಕ್ಕೆ ಬೆಲೆ ಸಿಗುತ್ತೆ : ಮತ್ತೆ ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಆರ್ ಶಂಕರ್

Facebook
Twitter
Telegram
WhatsApp

ನವದೆಹಲಿ: ಸಚಿವ ಸಂಪುಟದ ವಿಸ್ತರಣೆ ಮಾಡುವ ಫ್ಲ್ಯಾನ್ ನಡೆಯುತ್ತಿದ್ದು, ಈಗಾಗಲೇ ಸಿಎಂ ಸೇರಿದಂತೆ ಸಚಿವರು ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ಕಾಯುತ್ತಿದ್ದಾರೆ. ಈ ಮಧ್ಯೆ ಮಾಜಿ ಸಚಿವ ಆರ್ ಶಂಕರ್ ಕೂಡ ದೆಹಲಿಗೆ ಪಯಣ ಬೆಳೆಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದಕ್ಕೆ ಇವರು ಕೂಡ ಕಾರಣ ಕರ್ತರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಈ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಆರ್ ಶಂಕರ್ ಅವರು, ನಂಗೆ ನೂರಕ್ಕೆ ನೂರರಷ್ಟು ನಂಬಿಕೆ ಇದೆ. ಯಾಕಂದ್ರೆ ನಮ್ಮ ತ್ಯಾಗದ ಪರಿಶ್ರಮಕ್ಕೆ ಬೆಲೆ ಸಿಗುವ ವಿಶ್ವಾಸವಿದೆ. ಈಗಲೂ ಕಾಲ ಮಿಂಚಿಲ್ಲ. ಈ ವರ್ಷದಲ್ಲಾದರೂ ನಮ್ಮ ತ್ಯಾಗಕ್ಕೆ ಬೆಲೆ ಸಿಕ್ಕರೆ ನಮ್ಮ ಕ್ಷೇತ್ರದ ಮತದಾರರ ಋಣ ತೀರಿಸದಂತಾಗುತ್ತದೆ. ಆ ನಂಬಿಕೆಯಲ್ಲೇ ನಾನು ಇದ್ದೇನೆ. ಇಲ್ಲಿವರೆಗೂ ನಾನು ಎಲ್ಲಿ ಏನನ್ನು ಪ್ರಸ್ತಾಪ ಮಾಡಿಲ್ಲ. ಈಗ ದೆಹಲಿಗೆ ಬಂದಿದ್ದೇನೆ. ನೀವೂ ಪ್ರಶ್ನೆ ಮಾಡಿದ್ದಕ್ಕೆ ನಾನು ನನ್ನ ಮನಸ್ಸಿನ ಭಾವನೆಯನ್ಬು ಹೇಳುತ್ತಿದ್ದೇನೆ. ವರಿಷ್ಠರು ಏನು ಹೇಳ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ.

ಅನುದಾನವನ್ನು ತಂದು ಕೆಲಸ ಕಾರ್ಯಗಳನ್ನು ಮಾಡಬೇಕೆಂಬ ನಿರೀಕ್ಷೆಯಲ್ಲಿ ನಾನಿದ್ದೇನೆ. ಅದಕ್ಕಾಗಿಯೇ ನಾನು ಸೇರಿದಂತೆ ಹದಿನೇಳು ಶಾಸಕರು ಸೇರಿ ಈ ಬಿಜೆಪಿ ಸರ್ಕಾರವನ್ನು ತಂದಿದ್ದು.
ಸುಪ್ರೀಂ ಕೋರ್ಟ್ ನ ಆದೇಶದಂತೆ ಅನರ್ಹ ಎಂಬ ಕಟ್ಟಿಕೊಂಡು ಸುಮಾರು ದಿನಗಳ ಕಾಲ ಅನರ್ಹನಾಗಿ ಉಳಿದುಕೊಂಡು ತದ ನಂತರ ಎಂಎಲ್ಸಿಯಾಗಿ ಉಳಿದುಕೊಂಡು ಕೆಲವೇ ದಿನಗಳು ಮಾತ್ರ ಮಂತ್ರಿಯಾಗಿ ಕೆಲಸ ಮಾಡಿದೆ. ಆದರೆ ಇಂದು ನನ್ನ ಮತದಾರರು ಹೆಚ್ಚಿನ ನಿರೀಕ್ಷೆಯಿಟ್ಟುಕೊಂಡು ಮತ ನೀಡಿದ್ದಾರೆ. ಆದರೆ ಮತ ನೀಡಿದವರಿಗೆ ಹೆಚ್ಚಿನದ್ದಾಗಿ ಕೆಲಸ ಮಾಡಲು ಆಗುತ್ತಿಲ್ಲ. ಈ ಬಾರಿ ಕ್ಯಾಬಿನೇಟ್ ನಲ್ಲಿ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಚಿವ ಆರ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!