Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ : ನಾಟಕವು ಎಲ್ಲವನ್ನೂ ಒಳಗೊಂಡ ಸಮಗ್ರ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಸ್ವೀಕರಿಸುವಂತಾಗಬೇಕು. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ, ಸಮಾಜದ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ‌ ನಾಟಕಗಳಿಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

ತಾಲೂಕಿನ ತಳಕು ಹೋಬಳಿ ಬಂಜಗೆರೆ  ಗ್ರಾಮದಲ್ಲಿ ಕೃಪಪೊಷಕ ನಾಟಕ ಮಂಡಳಿ ಯುವಕರ ಸಂಘದ ವತಿಯಿಂದ ಗುರುವಾರ ನಡೆದ  “ಕುಡುಕ ಕಟ್ಟಿದ ಪ್ರೇಮಕೊಟೆ” ಸಾಮಾಜಿಕ ನಾಟಕ ದಲ್ಲಿ  ಅವರು  ಮಾತನಾಡಿ, ಎರಡು ವರ್ಷ ಕೋವಿಡ್ ಇದ್ದ ಕಾರಣ ನಾಟಕಗಳು ಸಂಪೂರ್ಣ ನಿಂತು ಹೋಗಿದ್ದವು. ಈಗ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಇಂದು ಎಲ್ಲೆಡೆ ನಾಟಕಗಳು ಕಳೆ ಕಟ್ಟಿವೆ. ನಾಟಕ ಪುರಾತನ ಗಂಡು ಕಲೆ. ರಂಗಭೂಮಿ ಬದುಕಿನ ಕನ್ನಡಿ ಹಾಗೂ ನೈಜ ಕಲೆಯಾಗಿದ್ದು, ಪ್ರೇಕ್ಷಕರೇ ಇದರ ಜೀವಾಳವಾಗಿದ್ದಾರೆ ಎಂದರು.

ಜಾಗತೀಕರಣ ಮತ್ತು ಅಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾಗಿರುವ ನಾಟಕಗಳು ಇಂದು ಹೆಚ್ಚು ಜನರನ್ನು ತಲುಪುತ್ತಿಲ್ಲ. ಜನತೆ ಸಿನಿಮಾ, ಟಿವಿ ಕಡೆಗೆ ಆಕರ್ಷಿತರಾಗಿ ನಾಟಕಗಳನ್ನು ನೋಡುವುದನ್ನೇ ಕಡಿಮೆ ಮಾಡಿದ್ದಾರೆ ಎಂದು ವಿಷಾಧಿಸಿದ ಅವರು, ಸಿನಿಮಾ, ಧಾರವಾಹಿಗಳ ಪ್ರಭಾವ ಎಷ್ಟೇ ಬೀರಿದರೂ ನಾಟಕ ಎಂದಿಗೂ ಜೀವಂತವಾಗಿರುತ್ತದೆ.

ನಾಟಕಗಳನ್ನು ಜನರು ಹೆಚ್ಚು ಹೆಚ್ಚು ನೋಡಿದಾಗ ಮತ್ತು ಹೆಚ್ಚು ಹೆಚ್ಚು ಪ್ರದರ್ಶನಗಳಾದಾಗ ಮಾತ್ರ ನಾಟಕಗಳ ಸಾರ್ಥಕತೆ ಪಡೆಯುತ್ತವೆ. ಸಮಾಜದಲ್ಲಿ ಕಲಾವಿದರಿಗೆ ಉತ್ತಮ ಸ್ಥಾನಮಾನಗಳು ಸಿಗಬೇಕು. ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ತಮ್ಮ ರಕ್ತಗತವಾದ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ.

ಆಧುನಿಕ ಯುಗದ ಒತ್ತಡಗಳಿಗೆ ನಮ್ಮ ಸಾಂಪ್ರದಾಯಿಕ ಕಲಾ ಪ್ರಕಾರಗಳು ಅವನತಿಗೊಳ್ಳುತ್ತಿವೆ. ರಾಜ್ಯದಲ್ಲಿ ಹಿಂದೊಮ್ಮೆ ನಾಟಕಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದವು ಈಗ ಆ ಪರಿಸ್ಥಿತಿ ಇಲ್ಲವಾಗಿದೆ. ಅಳಿದುಳಿದ ಕೆಲವು ವೃತ್ತಿ ರಂಗಭೂಮಿ ಕಂಪನಿಗಳು ಈ ನಾಟಕದ ಪರಂಪರೆಯನ್ನು ಮುಂದುವರೆಸುತ್ತಿವೆ. ಇವರಿಗೆ ನಮ್ಮ ಸಹಕಾರ, ಪ್ರೋತ್ಸಾಹ ನೀಡಬೇಕಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ ಇಂಜಿನಿಯರ್ ನಾಗಭೂಷನ್, ಗುತ್ತಿಗೆದಾರ ಹನುಮಂತಪ್ಪ, ನಿವೃತ ಎಸಿಪಿ ಅಜ್ಜಪ್ಪ,,ದಾವಣಗೆರೆ ಬಸಣ್ಣ,ನಗರಸಭೆ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!