Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂತೋಷ್ ಸಾವಿಗೆ ರಮೇಶ್ ಜಾರಕಿಹೊಳಿ ಕೂಡ ಕಾರಣ ಇರಬಹುದು : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

ಬೆಳಗಾವಿ: ಗುತ್ತುಗೆದಾರ ಸಂತೋಷ್ ಪಾಟೀಲ್ ಸಾವಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ಕಾರಣ ಇರಬಹುದು ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸದಾಗಿ ಆರೋಪ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಂತೋಷ್ ಸಾವಿಗೆ ರಮೇಶ್ ಜಾರಕಿ ಹೊಳಿ ಕಾರಣವಾಗಿರಬಹುದು. ಯಾಕೋ ಈ ಕೊಲೆ ಹಿಂದೆ ಜಾರಕಿಹೊಳಿ ಕಾರಣ ಆಗಿರಬಹುದು ಎಂಬ ಸಂಶಯ ಮೂಡುತ್ತಿದೆ. ಹಿಟ್ ಅಂಡ್ ರನ್ ಕೇಸ್ ನವರು. ಯಾಕೆ ಸೋಮವಾರದವರೆಗೆ ಕಾಯಬೇಕು. ಈಗಲೇ ರಾಜ್ಯದ ಜನತೆಗೆ ಮುಂದೆ ಹೇಳಬೇಕು ಅಲ್ವಾ. ನಾನು ಜಾಸ್ತಿ ಮಾತನಾಡುವುದಕ್ಕೆ ಆಗಲ್ಲ. ಅವರೇ ನಿನ್ನೆ ಹೇಳಿದ್ದರು ಒಳ್ಳೆ ಸಂಬಂಧ ಇತ್ತು ನನ್ನ ಜೊತೆ ಅಂತ. ಹೀಗಾಗಿ ಅವರು ಸಂತೋಷ್ ಸಾವಿಗೆ ಕಾರಣ ಆದರೇನೋ ಎಂಬ ಸಂಶಯ ಬರುತ್ತಾ ಇದೆ ಎಂದಿದ್ದಾರೆ.

ನಿನ್ನೆ ಸಂತೋಷ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನನ್ನ ಸಿಡಿ ಕೇಸ್ ಹಿಂದೆ ಇರುವವ ಮಹಾನಾಯಕ, ನಾಯಕಿಯೇ ಇದರಲ್ಲೂ ಇರಬಹುದು. ಎಲ್ಲವನ್ನು ಸೋಮವಾರ ಪ್ರೆಸ್ ಮೀಟ್ ಹೇಳುತ್ತೇನೆ. ನನ್ನ ಕೇಸ್ ಜೊತೆಗೆ ಈಶ್ವರಪ್ಪ ಕೇಸನ್ನು ಸಿಬಿಐಗೆ ವಹಿಸಬೇಕು ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಯಾಕೆ ಈಗಲೇ ಹೇಳಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!