Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೃತ ಸಂತೋಷ್ ಪತ್ನಿಗೆ 11 ಲಕ್ಷ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Facebook
Twitter
Telegram
WhatsApp

ಬೆಳಗಾವಿ: ಮಾಡಿದ ಕೆಲಸಕ್ಕೆ ಹಣ ಬಿಡುಗಡೆ ಮಾಡದೆ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ, ವಾಟ್ಸಾಪ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥ ಈಶ್ವರಪ್ಪಗೆ ಶಿಕ್ಷೆಯಾಗಬೇಕೆಂದು ಹೋರಾಡುತ್ತಿರುವ ಕಾಂಗ್ರೆಸ್ ನಾಯಕರು ಇಂದು ಮೃತ ಸಂತೋಷ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮಕ್ಕೆ ಡಿ ಕೆ ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಭೇಟಿ ನೀಡಿ, ಸಂತೋಷ್ ಪತ್ನಿ ಕೈಗೆ 11 ಲಕ್ಷ ರೂಪಾಯಿ ಹಣದ ಚೆಕ್ ಅನ್ನು ಕೊಟ್ಟಿದ್ದಾರೆ. ಸಂತೋಷ್ ತಾಯಿ ಹಾಗೂ ಪತ್ನಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಮಾತ್ರವಲ್ಲ, ಸಂಸದ ಪ್ರಕಾಶ್ ಹುಕ್ಕೇರಿ ಕೂಡ 5 ಲಕ್ಷ ಹಣವನ್ನು ಪರಿಹಾರವಾಗಿ ನೀಡಿದ್ದಾರೆ. ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮೃತ ಸಂತೋಷ್ ಕುಟುಂಬಕ್ಕೆ ಒಂದು ಕೋಟ ಪರಿಹಾರ ನೀಡಬೇಕು. ಜೊತೆಗೆ ಆತನ ಪತ್ನಿಗೆ ಸರ್ಕಾರಿ ಕೆಲಸವನ್ನು ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!