Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜೆಟ್ ನಲ್ಲಿ ಘೋಷಣೆಯಾಗಿದ್ದು 50% ಇಂಪ್ಲಿಮೆಂಟೆ ಆಗಲ್ಲ, : ಸಂಸದ ಪ್ರತಾಪ್ ಸಿಂಹ

Facebook
Twitter
Telegram
WhatsApp

ಮೈಸೂರು: ನಗರದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿರುವ ಸಂಸದ ಪ್ರತಾಪ್ ಸಿಂಹ ಅವರು ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.‌ ಅಷ್ಟೇ‌ ಅಲ್ಲ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಹೇಬರು ಬಜೆಟ್ ನಲ್ಲಿ ನಮ್ಮ ಮೈಸೂರು ವಿಮಾನ ನಿಲ್ದಾಣದ ರನ್ ವೇ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ 140 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಲಿಕ್ಕೆ ಒಪ್ಪಿಕೊಂಡು ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು.

 

ಬಹಳ ಖುಷಿ ಏನು ಅಂದರೆ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಘೋಷಣೆಯಾಗಿಯೇ ಉಳಿಯುತ್ತದೆ. ಯಾಕಂದ್ರೆ ಬಜೆಟ್ ನಲ್ಲಿ ಘೋಷಣೆಯಾಗಿದ್ದು 50% ಇಂಪ್ಲಿಮೆಂಟೆ ಆಗಲ್ಲ. ನಮ್ಮ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಹೇಬರು ಬಜೆಟ್ ನಲ್ಲಿ ಘೋಷಣೆಯನ್ನು ಮಾಡಿ, ಒಂದು ತಿಂಗಳು ಕೂಡ ಆಗಿಲ್ಲ. 319 ಕೋಟಿ ರೂಪಾಯಿಯನ್ನು ಕೂಡ ನಮಗೆ ರಿಲೀಸ್ ಮಾಡಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳಿಗೆ ಸಮಸ್ತ ಮೈಸೂರಿನ ಜನರ ಪರವಾಗಿ ಧನ್ಯವಾದ ಹೇಳುತ್ತೇನೆ.

ಮೈಸೂರಿನ ಏರ್ಪೋರ್ಟ್ ನಲ್ಲಿಯೇ ಮುಂದಿನ ದಿನಗಳಲ್ಲಿ ಅವಲಂಭಿಸುವಂತ ಮಂಡ್ಯ, ಚಾಮರಾಜನಗರ, ಕೊಡಗು ಈ ಭಾಗದ ಜನರ ಪರವಾಗಿ ನಾನು ಅನಂತ ಅನಂತ ಧನ್ಯವಾದ ಅರ್ಪಿಸುತ್ತೇನೆ. ಹೈವೇನಲ್ಲಿ ಎಮರ್ಜೆನ್ಸಿ ಇದ್ದಾಗ, ಅವಘಡಗಳು ಸಂಭವಿಸಿದಾಗ ಏರ್ ಲುಫ್ಟ್ ಮಾಡಬೇಕು ಎಂದಾಗ ಇದಕ್ಕೋಸ್ಕರ ಹೆಲಿಪ್ಯಾಡ್ ಕೂಡ ಮಾಡುತ್ತಿದ್ದೇವೆ. ಹೈವೇಯ ಮಧ್ಯೆ ಒಂದು ಕಡೆ ಹೆಲಿಪ್ಯಾಡ್ ಮಾಡುತ್ತೇವೆ. ರೆಸ್ಟ್ ಏರಿಯಾ ಕೂಡ ಮಾಡುತ್ತೇವೆ. ಸಾಕಷ್ಟು ಸೌಲಭ್ಯಗಳನ್ನು ರೆಸ್ಟ್ ಏರಿಯಾದಲ್ಲಿ ಸಿಗುತ್ತವೆ. ಮಳಿಗೆಗಳನ್ನು ಮಾಡಲಾಗುತ್ತೆ. ದೂರದ ಪ್ರಯಾಣ ಮಾಡಿದವರು ಈ ರೆಸ್ಟ್ ಏರಿಯಾದಲ್ಲಿ ವಿಶ್ರಾಂತಿ ಪಡೆಯಬಹುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!