Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ ಪ್ರಕರಣ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಬಜರಂಗದಳ ಒತ್ತಾಯ

Facebook
Twitter
Telegram
WhatsApp

ಚಿತ್ರದುರ್ಗ, (ಏ.22) : ಕಮಿಷನರ್ ಕಾರ್ ಮೇಲೆ ನಿಂತು ಪ್ರಚೋದಿಸಿದ ಮೌಲ್ವಿ ವಾಸಿಂ ಮೇಲೆ ಕಾನೂನಿನ ಅಡಿಯಲ್ಲಿ ಕೇಸ್ ದಾಖಲಿಸಬೇಕು.

ಕಮಿಷನರ್ ಕಾರ್ ಮೇಲೆ ನಿಂತ ಕಾಂಗ್ರೆಸ್ ಮುಖಂಡ ಅಲ್ತಾಫ್ ಮೇಲೆ ಗೂಂಡಕಾಯ್ದೆ ಮತ್ತು ದೇಶ ದ್ರೋಹದ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸುತ್ತೇವೆ.

ಮಾ. 16 ರಂದು ಹಳೆ ಹುಬ್ಬಳ್ಳಿ ಸಂಪೂರ್ಣ ಗಲಭೆಯ ತನಿಖೆಯನ್ನು ಎನ್.ಐ.ಎ. ಗೆ ವಹಿಸಬೇಕು ಎಂದು ಕೇಳಿಕೊಳ್ಳುತ್ತೇವೆ.
ಪ್ರಜಾಪ್ರಭುತ್ವ ಸಂವಿಧಾನದಲ್ಲಿ ಕಾನೂನು ಸುವ್ಯವಸ್ಥೆಗೆ ಬಹಳ ಮಹತ್ವವಿದ್ದು, ಕಾನೂನು ಕೈಗೆತ್ತಿಕೊಂಡು ಕಾನೂನು ಆರಕ್ಷಕ ಠಾಣೆ ಮೇಲೆ ದಾಳಿ ಮಾಡಿ ಸಿ.ಪಿ.ಐ. ಮತ್ತು ಪೊಲೀಸ್ ಸಿಬ್ಬಂಧಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿರುವುದು, ಇಡೀ ಸಮಾಜ ಭಯಭೀತಗೊಂಡಿದ್ದು ರಾಜ್ಯದಲ್ಲಿ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣಗೊಂಡಿದೆ.

ಇದರಿಂದ ಕಲ್ಲುತೂರಾಟ ಮತ್ತು ಪೆಟ್ರೋಲ್ ಬಾಂಬ್ ದಾಳಿ ಮಾಡುವ ಇಸ್ಲಾಂ ಮೂಲಭೂತವಾದಿಗಳು ಯಾವುದೇ ಭಯವಿಲ್ಲದೆ ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಅಟ್ಟಹಾಸ ಮೆರೆದಿದ್ದಾರೆ.

ಹಳೆ ಹುಬ್ಬಳ್ಳಿಯ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ಮನೆಯ ಆಸ್ತಿಯನ್ನು ಜಪ್ತಿ ಮಾಡಿ ಸರ್ಕಾರ ಗಲಭೆಕೋರರ ಆಸ್ತಿ  ಮುಟ್ಟುಗೋಲು ಹಾಕಿಕೊಳ್ಳಬೇಕು, ಮೌಲ್ವಿ ವಾಸಿಂ ಮತ್ತು ಅಲ್ತಾಫ್ ಮನೆಯ ಮೇಲೆ ಬುಲ್ಡೋಜರ್ ಸಂಸ್ಕøತಿ ಅನುಸರಿಸಿ ಕ್ರಮಕೈಗೊಳ್ಳಬೇಕು. ಆಗ ಮಾತ್ರ ಕಾನೂನು ಸುವ್ಯವಸ್ಥೆಗೆ ಬೆಲೆಯನ್ನು ನೀಡುತ್ತಾರೆ.

ಸರ್ಕಾರ ಪ್ರತಿಯೊಬ್ಬ ಪ್ರಜೆಯ ಹಿತ ಕಾಪಾಡುವುದು ಕರ್ತವ್ಯವಾಗಿದ್ದು, ಆದರೆ ಹಳೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿಗಳ ಸಿಬ್ಬಂಧಿಗಳ ಮೇಲೆ ನಡೆದ ಹಲ್ಲೆಯಿಂದ ಸಾರ್ವಜನಿಕ ವಲಯದಲ್ಲಿ ಭಯದ ವಾತವರಣವಾಗಿದ್ದು, ಇಷ್ಟೆಲ್ಲ ಸರ್ಕಾರಕ್ಕೆ ಅವಮಾನದ ಸಂಗತಿಯಾಗಿದ್ದು, ತಕ್ಷಣ ತಪ್ಪಿತಸ್ಥರ ಮನೆ ಮೇಲೆ ಬುಲ್ಡೋಜರ್ ದಾಳಿ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ.

ಈ ಬಗ್ಗೆ ಗಂಭೀರವಾಗಿ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಹುಬ್ಬಳ್ಳಿ ಛಲೋ ನಡೆಸಿ, ಈ ಘಟನೆಯನ್ನು ವಿರೋಧಿಸಲಾಗುವುದು. ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಶಿವಮೊಗ್ಗ ವಿಭಾಗ ಸಂಚಾಲಕ ಪ್ರಭಂಜನ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಪಿ. ರುದ್ರೇಶ್, ಬಜರಂಗದಳ ಜಿಲ್ಲಾ ಸಂಚಾಲಕ ಸಂದೀಪ್ ಸಹ ಸಂಚಾಲಕ ಕೇಶವ ನಗರ ಸಂಚಾಲಕ ರಂಗಸ್ವಾಮಿ, ಸಹ ಸಂಚಾಲಕ ಶಕ್ತಿ, ಗ್ರಾಮಾಂತರ ಅಧ್ಯಕ್ಷರಾದ ಶಶಿಧರ್, ಕಾರ್ಯಕರ್ತರಾದ ರೇಣು, ಕಿಶೋರ್, ಶ್ರೀನಿವಾಸ್ ಇನ್ನು ಮುಂತಾದವರು ಭಾಗಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!