Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏ.27 ರಂದು ನನ್ನಿವಾಳದತಲ್ಲಿ ನೇಗಿಲು ಮನೆ ವಿನೂತನ ಕಾರ್ಯಕ್ರಮ

Facebook
Twitter
Telegram
WhatsApp

ಚಳ್ಳಕೆರೆ(ಏ.25) : ತಾಲ್ಲೂಕು ರೈತ ಸಂಘ ತಾಲೂಕಾಡಳಿತ ಹಾಗೂ ಸ್ಥಳೀಯ  ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ನೇಗಿಲು ಮನೆ ಮಾಡುವ ಅರ್ಥಾತ್ ಹೊನ್ನಾರು ಹೂಡುವ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ನನ್ನಿವಾಳ ಗ್ರಾಮದಲ್ಲಿ  ಹಮ್ಮಿಕೊಳ್ಳಲಾಗಿದೆ  ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.

ನಗರದ  ತಾಲೂಕ ಕಚೇರಿಯಲ್ಲಿ ವಿವಿಧ ರೈತ ಸಂಘಟನೆಗಳು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ರೈತನಿಗೂ ಮತ್ತು ನೇಗಿಲಿಗೂ ಅವಿನಾಭಾವ ಸಂಬಂಧ ಇರುವುದರಿಂದ ವಸಂತಮಾಸದಲ್ಲಿ ಮುಂಗಾರು ಹಂಗಾಮು ಪ್ರಾರಂಭವಾದ ನಂತರ ರೈತನು ತನ್ನ ಜಮೀನನ್ನು ಹಸನು ಮಾಡಲು ಆರಂಭಿಸುತ್ತಾನೆ. ಇದನ್ನೇ ಹಳ್ಳಿಗಾಡಿನಲ್ಲಿ ನೇಗಿಲು ಮನೆ ಮಾಡುವ ಕಾರ್ಯಕ್ರಮ ಅಥವಾ ಹೊನ್ನಾರು ಹೂಡುವ  ಕಾರ್ಯಕ್ರಮ  (ಮೊದಲು ಮಾಡುವುದು) ಎಂದು ಮಧ್ಯಕರ್ನಾಟಕದಲ್ಲಿ ಪುರಾತನಕಾಲದಿಂದಲ್ಲೂ ಈ ಪದ್ದತಿ ನಡೆದು ಬಂದಿದೆ.

ಕಾರ್ಯಕ್ರಮದಲ್ಲಿ ಆಯ್ದ 9 ಜೊತೆ  ಹೋರಿ ಜೋಡೆತ್ತುಗಳು ಮತ್ತು ನೇಗಿಲುಗಳೊಂದಿಗೆ ಭೂಮಿ ಮನೆ ಮಾಡುವಂತ ಕಾರ್ಯಕ್ರಮ ಪ್ರಾರಂಭವಾಗುತ್ತದೆ.

ತದನಂತರ ಆಯ್ದ  ರೈತರೊಂದಿಗೆ ಭೂಮಿಯ ಬಳಕೆ ಹಂಗಾಮಿನಲ್ಲಿ ಬಿತ್ತನೆ ಮತ್ತು ನೀರಿನ ಸದ್ಬಳಕೆ ವಿಚಾರದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಇರುತ್ತದೆ.

ಸಮಾರಂಭವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಲಿದ್ದು ಚಳ್ಳಕೆರೆ ತಾಲೂಕಿನ ಪ್ರಗತಿಪರ ರೈತರು ರೈತ ಮುಖಂಡರುಗಳು ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಕೋರಿದರು.

ರೈತ ಸಂಘದ ಮುಖಂಡ ಸೋಮಗುದ್ದು ರಂಗಸ್ವಾಮಿ, ಕೆಪಿ ಭೂತಯ್ಯ ಮತ್ತು ರೆಡ್ಡಿಹಳ್ಳಿ ವೀರಣ್ಣ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ, ಹಂಪಣ್ಣ ತಿಪ್ಪೇಸ್ವಾಮಿ, ಹನುಮಂತಪ್ಪ, ಚಂದ್ರಣ್ಣ, ರಾಜಣ್ಣ ,ತಿಪ್ಪಣ್ಣ, ರೈತ ಮುಖಂಡರು ಹಾಗೂ ರೈತರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!