Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂಫಿಲ್ ವಿದ್ಯಾರ್ಥಿನಿಯಿಂದ ವಿವಿ ಆವರಣದಲ್ಲಿ ಬಾಂಬ್ ಸ್ಪೋಟ : ಪತ್ನಿಯ ಕೃತ್ಯಕ್ಕೆ ಶಬ್ಬಾಶ್ ಎಂದ ಪತಿ..!

Facebook
Twitter
Telegram
WhatsApp

ಕರಾಚಿ : ಪಾಕಿಸ್ತಾನದಲ್ಲಿ ಮಹಿಳೆಯೊಬ್ಬಳು ಆತ್ನಹತ್ಯಾ ಬಾಂಬ್ ಸ್ಪೋಟಿಸಿಕೊಂಡು ಸಾವನ್ನಪ್ಪಿದ್ದಾಳೆ‌. ಆಕೆಯೊಂದಿಗೆ ಮೂವರು ಚೀನಾ ನಾಗರಿಕರು ಸೇರಿದಂತೆ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ. ಈ ಘಟನೆಯನ್ನು ಆತ್ಮಹತ್ಯಾ ಬಾಂಬ್ ಸ್ಪೋಟಿಸಿದ ಮಹಿಳೆಯ ಪತಿ ಶ್ಲಾಘಿಸಿದ್ದಾರೆ. ಪತ್ನಿಯ ಕೃತ್ಯವನ್ನು ಮೆಚ್ಚಿಕೊಂಡಿದ್ದಾರೆ.

ಕರಾಚಿ ವಿಶ್ವವಿದ್ಯಾನಿಲಯದ ಚೀನಿ ಭಾಷಾ ಬೋಧನಾ ಕೇಂದ್ರವಾದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ಮಂಗಳವಾರ ಸ್ಪೋಟ ಸಂಭವಿಸಿತ್ತು. ಶಾರಿ ಬಲೋಚ್ ಎಂಬಾಕೆ ಆತ್ಮಹತ್ಯಾ ಬಾಂಬ್ ಸ್ಪೋಟಿಸಿದ್ದಾಳೆ. ಆಕೆಯ ಗಂಡ ಹಬಿಟನ್ ಬಶೀರ್ ಅಜ್ಞಾತ ಸ್ಥಳದಿಂದ ಟ್ವೀಟ್ ಮಾಡಿದ್ದಾರೆ. ಪತ್ನಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಸ್ವಾರ್ಥ ಕೃತ್ಯದ ಬಗ್ಗೆ ಹೇಳಲು ಮಾತುಗಳಿಲ್ಲ. ಅವಳು ಈ ಕೃತ್ಯ ಮಾಡಿದ್ದಾಳೆ ಎಂಬುದಕ್ಕೆ ಹೆಮ್ಮೆ ಪಡುತ್ತೇನೆ. ಮಹ್ರೋಚ್ ಮತ್ತು ಮೀರ್ ಹಾಸನ್ ಎಂತಹ ಮಹಾನ್ ಮಹಿಳೆ ನೀನು ಎಂದು ಯೋಚಿಸುತ್ತಾ ಬಹಳ ಹೆಮ್ಮೆಯಿಂದ ಮನುಷ್ಯರಾಗಿ ಬೆಳೆಯುತ್ತಾರೆ. ನೀನು ನಮ್ಮ ಜೀವನದ ಪ್ರಮುಖ ಭಾಗವಾಗಿ ಉಳಿಯುತ್ತಿ ಎಂದು ಟ್ವೀಟ್ ಮಾಡಿದ್ದಾರೆಂದು ಅಫ್ಘಾನ್ ಪತ್ರಕರ್ತ ಟ್ವೀಟ್ ನಲ್ಲಿ ಮಾಹಿತಿ ತಿಳಿಸಿದ್ದಾರೆ.

ಇನ್ನು ಆತ್ಮಹತ್ಯಾ ಬಾಂಬ್ ಸ್ಪೋಟಿಸಿದ ಶಾರಿಗೆ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಪತಿ ಬಶೀರ್ ದಂತ ವೈದ್ಯರಾಗಿದ್ದಾರೆ. ಜೊತೆಗೆ ಆಕೆಯ ತಂದೆ ಉಪನ್ಯಾಸಕರಾಗಿದ್ದಾರೆ. ಈ ಘಟನೆಯನ್ನು ಚೀನಾ ರಾಯಭಾರ ಕಚೇರಿ ಖಂಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!