Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂದಿರ-ಮಸೀದಿಯ ಧ್ವನಿವರ್ಧಕ ತೆಗೆಸಿದ ಸಿಎಂ ಆದಿತ್ಯನಾಥ್

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಮಸೀದಿಗಳಲ್ಲಿ ಬಳಸುವ ಧ್ವನಿವರ್ಧಕದ ಬಗ್ಗೆಯೇ ಸಾಕಷ್ಟು ಚರ್ಚೆಯಾಗುತ್ತಿದೆ. ಬರೀ ರಾಜ್ಯವಲ್ಲ ದೇಶಾದ್ಯಂತ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಲವೆಡೆ ಈ ವಿಚಾರ ರಾಜಕೀಯ ಬಣ್ಣವನ್ನು ಬಳಿದುಕೊಂಡಿದೆ. ಇದೀಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಂದಿರ ಮಸೀದಿ ಎನ್ನದೆ ಎಲ್ಲಾ ಕಡೆ ಧ್ವನಿವರ್ಧಕಗಳನ್ನು ತೆಗೆಸಿದೆ.

ಮಸೀದಿಗಳ ಧ್ವನಿವರ್ಧಕ ಕರ್ನಾಟಕದಲ್ಲಿ ಒಂದು ಆಯಾಮ ಪಡೆದುಕೊಂಡರೆ, ಮಹಾರಾಷ್ಟ್ರದಲ್ಲಿ ಮತ್ತೊಂದು ಆಯಾಮ ಪಡೆದುಕೊಂಡಿತ್ತು. ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಸಿಎಂ ಠಾಕ್ರೆ ಮನೆ ಮುಂದೆಯೇ ಹನುಮಾನ್ ಚಾಲೀಸಾ ಪಠಿಸಲು ಹೋಗಿ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿಯೂ ಧ್ವನಿವರ್ಧಕದ ಚರ್ಚೆಗಳಾಗುತ್ತಿದ್ದವು.

ಸುಪ್ರೀಂ ಕೋರ್ಟ್ ಈ ಧ್ವನಿವರ್ಧಕದ ಬಗ್ಗೆ ಸಲಹೆ, ಸೂಚನೆಗಳನ್ನು ಕೊಟ್ಟಿದೆ. ಅದರ ಶಬ್ದ ಎಷ್ಟಿರಬೇಕು ಎಂಬುದನ್ನು ವಿವರಿಸಿದೆ. ಆದರೂ ಸುಪ್ರೀಂ ಆಜ್ಞೆಯನ್ನು ಮೀರಿ, ಶಬ್ಧ ಜೋರಾಗಿಯೇ ಕೊಡಲಾಗಿತ್ತು. ಇದೀಗ ಯೋಗಿ ಆದಿತ್ಯನಾಥ್ ಸರ್ಕಾರ ಮಂದಿರ ಮಸೀದಿ ಎಂಬ ಭೇದ ಬಿಟ್ಟು ಒಂದೇ ದಿನದಲ್ಲಿ ಬರೋಬ್ಬರಿ 21,900 ಧ್ವನಿವರ್ಧಕಗಳನ್ನು ತೆಗೆಸಿದೆ. ಕಣ್ಣಿಗೆ ಕಂಡ ಅನಗತ್ಯ ಸ್ಪೀಕರ್ ಗಳನ್ನು ತೆಗೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!