Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವ ಜಯಂತಿ ಅಂಗವಾಗಿ ಅಲಂಕಾರಿಕ ರಾಸುಗಳ ಸ್ಪರ್ಧೆ : ಏನ್. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ, (ಮೇ.02) : ಬಸವ ಜಯಂತಿ ಅಂಗವಾಗಿ ತಾಲೂಕು ಆಡಳಿತ, ಚಳ್ಳಕೆರೆ ಮತ್ತು ಗ್ರಾಮ ಪಂಚಾಯತಿ ನನ್ನಿವಾಳ ಇವರ ಸಂಯುಕ್ತಾಶ್ರಯದಲ್ಲಿ ಅಲಂಕಾರಿಕ ರಾಸುಗಳ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ಏನ್. ರಘುಮೂರ್ತಿ ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ವ್ಯವಸಾಯಕ್ಕೆ ಪೂರಕವಾಗಿ ರಾಸುಗಳನ್ನು ಉಪಯೋಗಿಸಲಾಗುತ್ತದೆ. ಇಂತಹ ರಾಸುಗಳನ್ನು ಗ್ರಾಮೀಣ ಪ್ರದೇಶದಲ್ಲಿ ಬಸವ ಜಯಂತಿಯ ದಿನ ಗೆಜ್ಜೆ ಕೋಡಣಸು ಜೋಲು ಬಣ್ಣ ಮತ್ತು ಬ್ಯಾಗಡಿ ಗಳೊಂದಿಗೆ ಅಲಂಕಾರ ಮಾಡಿ ಪೂಜಿಸಲಾಗುತ್ತದೆ. ಮತ್ತು
ಮೆರವಣಿಗೆಯಲ್ಲೂ ಕೂಡ ಗ್ರಾಮಗಳಲ್ಲಿ ಪ್ರದರ್ಶಿಸಲಾಗುತ್ತದೆ.

ಚಿತ್ರದುರ್ಗ ಜಿಲ್ಲೆಯ ಕೆಲವುಭಾಗಗಳು ಸಾಂಸ್ಕೃತಿಕವಾಗಿ ಶ್ರೀಮಂತ ಪ್ರದೇಶಗಳಾಗಿದ್ದು ಈ ಪ್ರದೇಶಗಳಲ್ಲಿ ಆಚರಿಸುವ ಇಂತಹ ಸ್ಪರ್ಧೆಗಳಿಗೆ ತಾಲೂಕಾಡಳಿತ ಪ್ರೋತ್ಸಾಹ ನೀಡಬೇಕಾಗುತ್ತದೆ.

ಸ್ಥಳಿಯ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಹಯೋಗದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಮತ್ತು ಅತ್ಯಂತ ಉನ್ನತ ಶ್ರೇಣಿಯಲ್ಲಿ ರಾಸುಗಳನ್ನು ಶೃಂಗಾರ ಮಾಡಿರುವಂತ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ 5 ಸಾವಿರ ರೂ ಬಹುಮಾನ 2 ಸಾವಿರ ರೂಗಳನ್ನು ಘೋಷಿಸಲಾಗಿದೆ.

ಇದರಿಂದ ಸಹ ಪ್ರದೇಶದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೋಶದ ಪೋಷಿಸಿದಂತಾಗುತ್ತದೆ. ಕಾರ್ಯಕ್ರಮದಲ್ಲಿ ಚಳ್ಳಕ ಕ್ಷೇತ್ರದ ಶಾಸಕರಾದ ರಘು ಮೂರ್ತಿ ಭಾಗವಹಿಸಲಿದ್ದು, ಈ ವಿಜೇತರಾದ ರಾಸುಗಳಿಗೆ ಬಹುಮಾನ ನೀಡಲಿದ್ದಾರೆ.

ಈ ಭಾಗದ ರೈತರುಗಳು ತಮ್ಮ ರಾಸುಗಳನ್ನು ಅಲಂಕಾರಗೊಳಿಸಿ ಗ್ರಾಮೀಣ ಭಾಗದ ಈ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕಾಗಿ ಕೋರಿದ್ದಾರೆ. ಈ ಸಂದರ್ಭದಲ್ಲಿ ನನ್ನಿವಾಳ  ಗ್ರಾಮ ಪಂಚಾಯತ ಅಧ್ಯಕ್ಷರಾದಂತಹ ಬಸವರಾಜು ಮತ್ತು ಸದಸ್ಯರುಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!