Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ಸಮಸ್ಯೆ, ಹಣದುಬ್ಬರದ ಮಾತಾಡಲು ಸಮಯವಿಲ್ಲ, ಆದರೆ ರಾಹುಲ್ ಗಾಂಧಿ ಬಗ್ಗೆ ಮಾತಾಡಲು ಸಮಯವಿದೆ : ವೈರಲ್ ವಿಡಿಯೋಗೆ ಉತ್ತರ

Facebook
Twitter
Telegram
WhatsApp

ನವದೆಹಲಿ: ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನಾನು ಮುಂದು ತಾ ಮುಂದು ಬಿಜೆಪಿ ನಾಯಕರು ಕುಟುಕುತಿದ್ದಾರೆ. ಇದೇ ವಿಚಾರಕ್ಕೆ ಕಾಂಗ್ರೆಸ್ ಕೂಡ ಸುಮ್ಮನೆ ಕೂತಿಲ್ಲ. ಬದಲಿಗೆ ಮತ್ತೆ ತಿರುಗೇಟು ನೀಡಿದೆ.

ಮೊದಲಿಗೆ ಬಿಜೆಪಿ ನಾಯಕ ಅಮಿತ್ ಮಾಳವಿಯ ಈ ವಿಡಿಯೋ ಹಂಚಿಕೊಂಡು, ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ ಪಾರ್ಟಿಯಲ್ಲಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಟೀಕಿಸಿದ್ದರು. ಬಿಜೆಪಿ ನಾಯಕರ ಟೀಕೆಗಳಿಗೆ ಉತ್ತರಿಸಿರುವ ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್, ರಾಹುಲ್ ಗಾಂಧಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದರೆ ಸಂಘಿಗಳಿಗೆ ಯಾಕೆ ಭಯ. ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದರೆ ತಪ್ಪೇನು..? ಸಂಘಿಗಳು ಯಾಕೆ ಸುಳ್ಳನ್ನು ಹಬ್ಬಿಸುತ್ತಾರೆ ಎಂದಿದ್ದಾರೆ.

ಸದ್ಯ ರಾಹುಲ್ ಗಾಂಧಿ ವೈಯಕ್ತಿಕ ಭೇಟಿಯಲ್ಲಿದ್ದಾರೆ. ಬಿಜೆಪಿಯವರು ವಿದ್ಯುತ್ ಸಮಸ್ಯೆ, ಹಣದುಬ್ಬರ ಏರಿಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವುದನ್ನು ಬಿಟ್ಟು ರಾಹುಲ್ ಗಾಂಧಿ ಹಿಂದೆ ಬಿದ್ದಿದ್ದಾರೆ. ಬೇರೆಯದ್ದಕ್ಕೆ ಸಮಯವಿಲ್ಲ, ಆದರೆ ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಸಮಯವಿದೆ ಎಂದು ಕುಟುಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!