Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗದಗ ಅನ್ನದಾನೀಶ್ಚರ ಮಠದಲ್ಲಿ ಬಸವ ಜಯಂತಿ, ರಂಜಾನ್ ಆಚರಣೆ

Facebook
Twitter
Telegram
WhatsApp

ಗದಗ: ಇಂದು ನಾಡಿನೆಲ್ಲೆಡೆ ಬಸವ ಜಯಂತಿ ಹಾಗೂ ಮುಸ್ಲಿಂರ ಪವಿತ್ರ ಹಬ್ಬ ರಂಜಾನ್ ಆಚರಣೆ ಮಾಡಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಹಾಗೂ ಮುಂಡರಗಿ ಅನ್ನದಾನೀಶ್ವರ ಮಠದಲ್ಲಿ ಇಂದು ವಿಭಿನ್ನವಾಗಿ ಬಸವ ಜಯಂತಿ ಹಬ್ಬದ ಜೊತೆಗೆ ರಂಜಾನ್ ಆಚರಣೆ ಮಾಡಲಾಗಿದೆ.

ಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ವಿಶೇಷವಾದ ಪಾದಯಾತ್ರೆ ಮಾಡಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ ಬಿಂಬಿಸುವ ಪಾದಯಾತ್ರೆ ನಡೆದಿದೆ. ಈ ವೇಳೆ ಟ್ರ್ಯಾಕ್ಟರ್ ನಲ್ಲಿ ಬಸವಣ್ಣನ ಫೋಟೋ ಇಟ್ಟು ಮೆರವಣಿಗೆ ಮಾಡಿದ್ದಾರೆ.

ಮಠದ ಸ್ವಾಮೀಜಿಗಳ ಜೊತೆಗೆ ಮುಸ್ಲಿಂ ಬಾಂಧವರು ಸೇರಿದ್ದರು. ಎಲ್ಲರೂ ಒಂದೇ ಎಂಬ ಮಂತ್ರ ಪಠಿಸಿದರು. ದೇಚರೊಂದೆ ನಾಮ ಹಲವು. ಧರ್ಮಕ್ಕಿ ದಯೆ ದೊಡ್ಡದು, ಜಾತಿಗಿಂತ ನೀತಿ ಮೇಲು, ಮಾನವ ಕುಲಕ್ಕೆ ಜಯವಾಗಲಿ. ಹಿಂದೂ ಮುಸ್ಲಿಂ ನಾವೇಲ್ಲಾ ಒಂದು ಎಂಬ ಘೋಷವಾಕ್ಯ ಕೂಗಿದರು.

ಹಿಂದೂ ಮುಸ್ಲಿಂ ಒಟ್ಟಾಗಿ ಬಸವಣ್ಣ ಹಾಗೂ ಪೈಗಂಬರರಿಗೆ ಒಟ್ಟಾಗಿಯೇ ಪೂಜೆ ಸಲ್ಲಿಸಿದರು. ಪ್ರಾರ್ಥಾನೆ ಮಾಡಿದರು, ಪೂಜೆ ಸಲ್ಲಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಬಸವಣ್ಣನ ಅನುಯಾಯಿಗಳಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!