Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳೊಂದಿಗೆ ಮುಖ್ಯಮಂತ್ರಿಗಳ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ(ಮೇ.6) : ಮೇ.14 ರಂದು ಹಿರಿಯೂರು ತಾಲ್ಲೂಕಿನ ಐತಿಹಾಸಿಕ ಧರ್ಮಪುರ ಕೆರೆಗೆ ವಿ.ವಿ.ಸಾಗರ ಜಲಾಶಯದಿಂದ ನೀರು ಬಿಡುವ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಕ್ರಮ ಆಯೋಜನೆಗೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆ ಅಡಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಬೇಕು. ಭೂಮಿ ಪೂಜೆ,ಶಂಕುಸ್ಥಾಪನೆ,ಉದ್ಘಾಟನೆ ಹಾಗೂ ಲೋಕಾರ್ಪಣೆಗೆ ಸಿದ್ಧವಿರುವ ಕಾಮಗಾರಿಗಳ ವಿವರ ಹಾಗೂ ಮೊತ್ತಗಳನ್ನು ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ವೇದಿಕೆ ಕಾರ್ಯಕ್ರಮ ಆಯೋಜನೆಗೆ ಸೂಕ್ತ ಸ್ಥಳವನ್ನು ತಹಶಿಲ್ದಾರರು ಪರಿಶೀಲಿಸಿ ಆಯ್ಕೆ ಮಾಡಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಪಂಚಾಯಿತಿ ಅಡಿ ಬರುವ ಕಾರ್ಯಕ್ರಮಗಳ ವರದಿಯನ್ನು ಜಿ.ಪಂ ಸಿ.ಇ.ಓ ಮೂಲಕ ನೀಡಿ. ಸೂಕ್ತ ಪೆÇಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿ.ಇ.ಓ.ಡಾ.ಕೆ. ನಂದಿನಿದೇವಿ, ಜಿಲ್ಲಾ ಪೆÇಲೀಸ್ ರಕ್ಷಣಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!