Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವತತ್ವ ದಿಂದ ಮಾತ್ರ ದೇಶದಲ್ಲಿ ಶಾಂತಿ ನೆಲಸಲು ಸಾಧ್ಯ : ಬಸವ ಪ್ರಭು ಸ್ವಾಮೀಜಿ.

Facebook
Twitter
Telegram
WhatsApp

ಬೆಂಗಳೂರು, (ಮೇ.07) : ಈ ದೇಶದಲ್ಲಿ ಶಾಂತಿ ನೆಲಸಲು ಬಸವತತ್ವ ಪಾಲನೆ ಅನಿವಾರ್ಯ ಎಂದು ದಾವಣಗೆರೆ ವಿರಕ್ತ ಮಲಠದ ಪೂಜ್ಯ ಶ್ರೀ ಬಸವ ಪ್ರಭು ಸ್ವಾಮೀಜಿಗಳು ಹೇಳಿದರು.

ವಿಜಯನಗರದಲ್ಲಿ ಬಸವ ಕೇಂದ್ರ ಆಯೋಜಿಸಿದ್ದ ಶರಣ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿ,
ಈಗ ನಡೆಯುತ್ತಿರುವ ಯುದ್ಧಗಳು ಆಯಾ ದೇಶದಲ್ಲಿ ಅಶಾಂತಿ ಉಇಂಟುಮಾಡಿವೆ. ಅದರಿಂದ ದೇಶ ಮತ್ತು ದೇಹಕ್ಕೂ ಹಾನಿಯನ್ನು ನಾವು ನೋಡುತ್ತಿದ್ದೇವೆ. ಮೋಸ ವಂಚನೆಯಿಂದ ಕೋಟಿ ಕೋಟಿ ಹಣ ಸಂಪಾದಿಸುವುದು ಮುಖ್ಯವಲ್ಲ ಕಾಯಕ ನಿಷ್ಠೆಯಿಂದ ದುಡಿದ ಹಣ ಶ್ರೇಷ್ಠವಾದುದು. ಎಲ್ಲರೂ ದಾಸೋಹ ಮನೋಭಾವದಿಂದ ಇಂದು ಸೇವೆ ಮಾಡಿ ಅದೇ ನಿಮಗೆ ದುಪ್ಪಟ್ಟಾಗುತ್ತದೆ ಎಂದರು.

ಖ್ಯಾತ ಗಾಯಕ ಶಶಿಧರ್ ಕೋಟೆ ಮಾತನಾಡಿ ಗುರುಗಳ ಮಾರ್ಗದಲ್ಲಿ ಇಂದು ನಾವೆಲ್ಲ ಹೋದರೆ ಮಾತ್ರ ನಮ್ಮ ನೆಲ ಜಲ ದೇಶ ಉಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಾಸ್ತಾವಿವಾಗಿ ಮಾತನಾಡಿದ ಬಸವ ಕೇಂದ್ರದ ಅಧ್ಯಕ್ಷರಾದ ಅರುಣ್ ಕುಮಾರ್ ಡಿ. ಟಿ ಮಾತನಾಡಿ ನಾಡಿನಾದ್ಯಂತ  ಬಸವ ಕೇಂದ್ರಗಳ ಕಾರ್ಯಗಳನ್ನು  ವಿವರಿಸಿದರು.

ಈ ಕಾಯ ಬಂದಿರುವಿದೇಕೆ ? ವಿಷಯದ ಬಗ್ಗೆ ಕೃಷ್ಣ ಬಾಯಿ ಉಪನ್ಯಾಸ ನೀಡಿದರು.

ಮಾಗಡಿ ರಸ್ತೆ ಪೊಲೀಸ್ ಸಬ್ ಇನ್ಸಪೆಕ್ಟರ್ ಕು.ಸುಮಂಗಲ, ಬಸವ ತತ್ವದ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಹೋದಲ್ಲಿ ಕ್ರೈಮ್ ಗಳು ಇರುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯ ದಾಸೇಗೌಡ ಸೇರಿದಂತೆ ಅನೇಕ ಭಕ್ತಾದಿಗಳು ಭಾಗವಹಿಸಿದ್ದರು.

ದಾಸೋಹ ಮಾಡಿದ ಶಿವಪ್ರಕಾಶ್ ಹಾಗೂ ವಚನಗಯನ ಮಾಡಿದ ಪೇಮ ಶಾಂತವೀರಯ್ಯ ಅವರಿಗೆ ಸನ್ಮಾನಿಸಲಾಯಿತು. ಅಮೃತ್ ದೂಪ್ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!