Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗದಗದಲ್ಲಿ ಸಿಡಿಲು ಬಡಿದು 24 ಕುರಿಗಳು ಸಾವು..ಇಬ್ಬರು ಕುರಿಗಾಹಿಗಳು ಬಚಾವ್..!

Facebook
Twitter
Telegram
WhatsApp

ಗದಗ: ಮಳೆ ಗಾಳಿ ಶುರುವಾಗಿದೆ. ಅಲ್ಲಲ್ಲಿ ಸಿಡಿಲು ಬಡಿದು ದುರಂತ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಇದೀಗ ಗದಗ ಜಿಲ್ಲೆಯಲ್ಲಿ ಸಿಡಿಲಿಗೆ 24 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಕುರಿಗಾಹಿಗಳು ಬದುಕುಳಿದಿದ್ದಾರೆ.

ಅಸುಂಡಿ ಗ್ರಾಮದ ನಿವಾಸಿಯಾಗಿರುವ ನಾಗಪ್ಪ ಸಾಸವಿಹಳ್ಳಿ ಮತ್ತು ಈತನ ಸಂಬಂಧಿ ಬಾಲಕ ಪ್ರಮೋದ್ ಕುರಿಗಳನ್ನು ಮೇಯಿಸಲು ಹೋಗಿದ್ದರು. ಇನ್ನೇನು ಸಂಜೆ ವೇಳೆಗೆ ಕುರಿಗಳನ್ನೆಲ್ಲಾ ಮೇಯಿಸಿ, ಸಂಜೆ ವಾಪಾಸ್ ಆಗುವ ವೇಳೆಗೆ ಕುರಿಗಾಹಿಗಳಿಗೆ ಬರ ಸಿಡಿಲು ಬಡಿದಂತಾಗಿದೆ. ಸಿಡಿಲು ಬಡಿದು 24 ಕುರಿಗಳು ಸಾವನ್ನಪ್ಪಿವೆ. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆ ಗಾಳಿ ಹೆಚ್ಚಾಗಿದ್ದ ಕಾರಣ, ಮರದ ಕೆಳಗಡೆ ಆಶ್ರಯ ಪಡೆದಿದ್ಸ ಕುರಿಗಾಹಿಗಳು ಮಳೆ ಹೆಚ್ಚಾದ ಬೆನ್ನಲ್ಲೇ ಪಕ್ಕದಲ್ಲಿಯೇ ಇದ್ದ ಕಟ್ಟಡದ ಒಳಗೆ ನಿಂತಿದ್ದರು. ಆದರೆ ಅದೆ ಕಟ್ಟಡಕ್ಕೆ ಸಿಡಿಲು ಬಡಿದಿದೆ. ಕಟ್ಟಡ ನೋಡ ನೋಡುತ್ತಿದ್ದಂತೆ ಉರುಳಿ ಬಿದ್ದಿದ್ದು, ಕುರಿಗಳ ಜೊತೆಗೆ ಕುರುಗಾಹಿಗಳು ಅವಶೇಷಗಳಡಿ ಸಿಲುಕಿದ್ದಾರೆ. ಅದರೆ ಅವಶೇಷಗಳೊಡನೆ ಸಿಲುಕಿದ್ದ ನಾಗಪ್ಪ ಕಷ್ಟಪಟ್ಟು ಹೊರ ಬಂದಿದ್ದಾನೆ. ಪ್ರಜ್ಞೆ ತಪ್ಪಿದ್ದ ಬಾಲಕನನ್ನು ಹೊರ ಎಳೆದು ತಂದಿದ್ದಾನೆ. ಅದೃಷ್ಟವಶಾತ್ ಇಬ್ಬರು ಬದುಕುಳಿದಿದ್ದಾರೆ. ಆದರೆ ಕುರಿಗಳು ಸಾವನ್ನಪ್ಪಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!