Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋರ್ಟ್ ತೀರ್ಪು ಜಾರಿ ಮಾಡಬೇಕಾ, ಬೇಡವಾ..?: ಆಜಾನ್ ಬಗ್ಗೆ ಸಿಟಿ ರವಿ ಪ್ರಶ್ನೆ

Facebook
Twitter
Telegram
WhatsApp

ನೆಲಮಂಗಲ: ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಸಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆ ಇಂದಿನಿಂದ ಸುಪ್ರಭಾತ ಶುರು ಮಾಡಿಕೊಂಡಿದೆ. ಈ ಸಂಬಂಧ ಮಾತನಾಡಿದ ಸಿ ಟಿ ರವಿ, ಕೋರ್ಟ್ ತೀರ್ಪು ಜಾರಿ ಮಾಡಬೇಕಾ ಬೇಡವಾ..? ಮಾಡಬಾರದು ಎಂದರೆ ನೀವೂ ಸಂವಿಧಾನ ವಿರೋಧಿಯಾ ಎಂದು ಪ್ರಶ್ನಿಸಿದ್ದಾರೆ.

ಬರೆದಿಟ್ಟುಕೊಳ್ಳಲಿ ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಇರುವ ರಾಜ್ಯಗಳಲ್ಲೂ ಅಧಿಕಾರ ಕಳೆದುಕೊಳ್ಳುತ್ತೆ. ಈ ರೀತಿಯ ನಡವಳಿಕೆಯಿಂದಾಗಿ. ಕಾನೂನು ಸುವ್ಯವಸ್ಥೆಯ ಕೆಲಸವನ್ನು ಪೊಲೀಸರು ಮಾಡುತ್ತಾರೆ. ಈಗ ಬಂದಿರುವ ಪ್ರಶ್ನೆ ಕಾಂಗ್ರೆಸ್ ನಿಲುವೇನು. ನ್ಯಾಯಲಯದ ತೀರ್ಪನ್ನು ಅನುಷ್ಠಾನಗೊಳಿಸಬೇಕಾ ಬೇಡವಾ..? ಪರ್ಮಿಷನ್ ಯಾರು ತೆಗೆದುಕೊಂಡಿದ್ದಾರೆ. ಯಾರು ಪೊಲೂಷನ್ ಕಂಟ್ರೋಲ್ ಬೋರ್ಡ್ ನಿಯಮ ಮೀರಿ, ಅನುಮತಿ ಇಲ್ಲದೆ ಮೈಕ್ ಹಾಕುತ್ತಾರೆ, ಅವರು ಹಿಂದೂ ಇರಲಿ, ಮುಸ್ಲಿಂ ಇರಲಿ ಅದನ್ನು ಖಂಡಿಸುತ್ತೇವೆ. ಇದು ನಮ್ಮ ನಿಲುವು.

ನಾವು ಹೇಳುವುದು ಏನು ಅಂದ್ರೆ ಸುಪ್ರೀಂ ಕೋರ್ಟ್ ತೀರ್ಪು ಯಥಾವತ್ತಾಗಿ ಅನುಷ್ಠಾನಗೊಳಿಸಿ. ಕೋರ್ಟ್ ತೀರ್ಪಿನ ಬಗ್ಗೆ ಸಹಮತವಿಲ್ಲದೆ ಹೋದರೆ ಮೇಲ್ಮನವಿ ಸಲ್ಲಿಸಲಿ. ಈ ತೀರ್ಪು ನಮಗೆ ಬಾಧಕವಾಗುತ್ತೆ, ಪುನರ್ ಪರಿಶೀಲನೆ ಮಾಡಿ ಅಂತ ಅಪೀಲು ಹಾಕಿ. ಎಲ್ಲಿಯವರೆಗೂ ಅಪೀಲು ಹಾಕಲ್ಲವೋ ಅಲ್ಲಿಯವರೆಗೂ ನ್ಯಾಯಾಲಯದ ತೀರ್ಪನ್ನು ಗೌರವಿಸಲೇಬೇಕು ಎಂದು ಸಿಟಿ ರವಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!