Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ : ಸಚಿವ ಬಿಸಿ ಪಾಟೀಲ್

Facebook
Twitter
Telegram
WhatsApp

ಬೆಂಗಳೂರು: ರಾಜ್ಯದ ಹಲವೆಡೆ ಜೋರು ಮಳೆ ಶುರುವಾಗಿದೆ. ಇದೀಗ ವ್ಯವಸಾಯ ಮಾಡುವವರು ಭಿತ್ತನೆ ಕಡೆಗೆ ಗಮನ ಕೊಡುತ್ತಿದ್ದಾರೆ. ಈ ವೇಳೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಅಗತ್ಯತೆ ಹೆಚ್ಚಾಗಿರುತ್ತದೆ. ಆದರೆ ಕೆಲವೊಂದು ಜಿಲ್ಲಾ ಕೇಂದ್ರದಲ್ಲಿ ಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆಯ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಸಚಿವ ಬಿ ಸಿ ಪಾಟೀಲ್, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ರೀತಿಯ ಕೊರತೆ ಇಲ್ಲ. 2022-23ರಲ್ಲಿ 82.67ಲಕ್ಷ ಎಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದೆ. ಇದುವರೆಗೂ 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆಯಾಗಿದೆ.

ರಾಜ್ಯದಲ್ಲಿ 5.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜದ ಬೇಡಿಕೆ ಇದೆ. 8.65 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರಾಜ್ಯಾದ್ಯಂತ ಕೃಚಿ ಇಲಾಖೆಯ ರೈತ ಸಂಪರ್ಕ ಕೇಂದ್ರದಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು. ರಾಜ್ಯದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಕೃತಕ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!