Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಹುಕಾರ್ ಗಳೆಲ್ಲಾ ಭಿಕ್ಷುಕರಾಗುತ್ತಿದ್ದಾರೆ ಡಿಕೆಶಿ ಹೇಳಿಕೆಗೆ ಅವರದ್ದೇನು ಸಾಲ ಇಲ್ಲವಾ ಎಂದ ಸಚಿವ ಸೋಮಶೇಖರ್

Facebook
Twitter
Telegram
WhatsApp

ಬೆಳಗಾವಿ: ಸಾಹುಕಾರ್ ಗಳೆಲ್ಲಾ ಭಿಕ್ಷುಕರಾಗುತ್ತಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಸಚಿವ ಎಸ್ ಟಿ ಸೋಮಶೇಖರ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ರಮೇಶ್ ಅಷ್ಟೇ ಅಲ್ಲ ಲಕ್ಷ್ಮೀ ಹೆಬ್ಬಾಳ್ಕರ್ ಅವರದ್ದು ಸಾಲ ಬಾಕಿ ಇದೆ. ಲಕ್ಷ್ಮೀ ಒಡೆತನದ ಸಕ್ಕರೆ ಕಾರ್ಖಾನೆ ಸಾಲವೂ ಬಾಕಿ ಇದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಹೆಚ್ಚು ಸಾಲ ಬಾಕಿ ಇದೆ. ಇದರಲ್ಲಿ ರಾಜಕೀಯವೇನಿಲ್ಲ. ಮುಚ್ಚು ಮರೆಯೂ ಇಲ್ಲ ಎಂದಿದ್ದಾರೆ.

ನಾನು ಮುಖ್ಯಮಂತ್ರಿಯನ್ನು ನೇರವಾಗಿ ಕೇಳಬೇಕು. ನಾವೂ ಹದಿನೇಳು ಜನ ಸರ್ಕಾರ ತಂದಿರುವುದು. ನಾನೊಬ್ಬನೇ ತಂದಿಲ್ಲ. ಯಾರು ಏನು ಮಾಡ್ತಾರೆ, ಏನು ಎಂಬುದು ಮುಖ್ಯಮಂತ್ರಿ ಅವರಿಗೆ ಸಂಪೂರ್ಣ ಮಾಹಿತಿ ಇದೆ. ನಮಗೆ ಆ ಬಗ್ಗೆ ಎಲ್ಲಾ ಮಾಹಿತಿ ಇಲ್ಲ. ನಮಗೇನಿದ್ರು ಸಹಕಾರ ಖಾತೆ ಕೊಟ್ಟಿದ್ದಾರೆ, ಅದಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳಿದ್ದರೆ ಸರಿ ಪಡಿಸುವ ಕೆಲಸ ನನ್ನದು. ಉಳಿದದ್ದೆಲ್ಲಾ ಮುಖ್ಯಮಂತ್ರಿಗಳದ್ದೆ ಪರಮಾಧಿಕಾರ ಎಂದಿದ್ದಾರೆ.

ಸಚಿವ ಸಂಪುಟದ ಬಗ್ಗೆ ಮಾತನಾಡಿ, ಏನು ಮಾಡಬೇಕು ಎಂಬುದು ಸಿಎಂಗೆ ಸಂಪೂರ್ಣ ಮಾಹಿತಿ ಇದೆ. ಕೇಂದ್ರ ನಾಯಕರಿಗೂ ಮಾಹಿತಿ ಇದೆ. ಮುಖ್ಯಮಂತ್ರಿಗಳು ಹೈಕಮಾಂಡ್ ಬಳಿ ಚರ್ಚೆ ಮಾಡಿ ಮುಂದುವರೆಯುತ್ತಾರೆ. ರಾಷ್ಟ್ರೀಯ ಪಕ್ಷವಾದ್ದರಿಂದ ಕೇಂದ್ರದ ನಾಯಕರಿರುತ್ತಾರೆ, ಕೇಂದ್ರದ ಅಧ್ಯಕ್ಷರಿರುತ್ತಾರೆ. ಅವರತ್ರ ಮಾತಾಡಿ ಮಾಡುವುದಕ್ಕೆ ಮುಖ್ಯಮಂತ್ರಿಗಳಿಗೆ ಅಧಿಕಾರವಿರುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!