Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ. 14 ರಂದು ಉಡುಪಿಯಲ್ಲಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶ : ಟಿ.ಷಫೀವುಲ್ಲಾ

Facebook
Twitter
Telegram
WhatsApp

ಚಿತ್ರದುರ್ಗ,(ಮೇ.11) : ರಾಜ್ಯ ಮಟ್ಟದ ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶವು ಮೇ. 14 ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯರಾದ ಟಿ.ಷಫೀವುಲ್ಲಾ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಮಾವೇಶವೂ ಯಾವುದೇ ಧರ್ಮ, ಜನಾಂಗದ ವಿರುದ್ದ ಅಲ್ಲ, ಸರ್ವ ಜನರ ಒಳಿತಿಗಾಗಿ ನಡೆಯುವ ಸಮಾವೇಶವಾಗಿದೆ. ಇದರಲ್ಲಿ ವಿವಿಧ ಧರ್ಮದ 13 ಜನ ಗುರುಗಳು ಮತ್ತು ಮೂರು ಜನ ಹೈಕೋರ್ಟನ ನ್ಯಾಯಾಧಿಶರು ಭಾಗವಹಿಸಲಿದ್ದಾರೆ.

ಚಿತ್ರದುರ್ಗದಿಂದ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಕಾರ್ಮೀಕರು, ರೈತರು, ಒಳಗೊಂಡಂತೆ ಮೂರು ನೂರು ಜನ ಭಾಗವಹಿಸಲಿದ್ದಾರೆ ಎಂದ ಅವರು ಅಂದು ಮದ್ಯಾಹ್ನ 2 ಗಂಟೆಗೆ ಉಡುಪಿಯ ಹುತಾತ್ಮ ಚೌಕದಿಂದ ಸಾವರಸ್ಯ ನಡಿಗೆ ಪ್ರಾರಂಭವಾಗಿ ಸಂಜೆ 4 ಕಕ್ಕೆ ಕ್ರಶ್ಚಿಯನ್ ಶಾಲಾ ಮೈದಾನದಲ್ಲಿ ಸಹಬಾಳ್ವೆ ಸಮಾವೇಶ ನಡೆಯಲಿದೆ.

ವಕೀಲರ ಸಂಘದ ಅಧ್ಯಕ್ಷರಾದ ಶಿವುಯಾದವ್ ಮಾತನಾಡಿ, ಸರ್ಕಾರ ಎಲೋ ಒಂದು ಕಡೆಯಲ್ಲಿ ಕೋಮುವಾದಿಗಳಿಗೆ ಬೆಂಬಲವನ್ನು ನೀಡುತ್ತಿದೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಇದೆ ಇಂತಹವುಗಳನ್ನು ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರ ಶಾಂತಿಯನ್ನು ಕದಡುವ ಕಾರ್ಯವನ್ನು ಮಾಡುತ್ತಿದೆ. ಕೋಮುವಾದಿ ಸರ್ಕಾರ ಇದಕ್ಕೆ ಬೆಂಬಲವನ್ನು ನೀಡುತ್ತಿದೆ. ಜಾತಿ, ಧರ್ಮ, ಜನಾಂಗದ ಮದ್ಯೆ ವಿಷ ಬೀಜವನ್ನು ಸರ್ಕಾರ ಬಿತ್ತವ ಕಾರ್ಯವನ್ನು ಮಾಡುತ್ತಿದೆ. ಶಾಂತಿಯಿಂದ ಇರುವ ರಾಜ್ಯವನ್ನು ಅಶಾಂತಿಯ ವಾತಾವರಣವನ್ನು ಮೂಡಿಸುತ್ತಿದೆ ಎಂದು ದೂರಿದರು.

ಶಿವಕುಮಾರ್ ಮಾತನಾಡಿ, ಸರ್ಕಾರ ಇಂದಿನ ಯುವ ಪೀಳಿಗೆಯಲ್ಲಿ ಧಾರ್ಮಿಕ ಭಾವನೆಯನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದೆ. ಇದರಿಂದ ಅವರ ಜೀವನವನ್ನು ಹಾಳು ಮಾಡುತ್ತಿದೆ. ಸರ್ಕಾರಕ್ಕೆ ಇದರ ಬೆಂಬಲ ಇದೆ ಎಂದರು.

ಟಿಪ್ಪು ಸುಲ್ತಾನ ವೇದಿಕೆಯ ಟಿಪ್ಪು ಖಾಸಿಂ ಆಲಿ, ಒಡೆಯರ್, ಸಮಾನ್ ವುಲ್ಲಾ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!