Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಜಿಪಿ ರವೀಂದ್ರನಾಥ್ ರಾಜೀನಾಮೆಗೂ ನನಗೂ ಸಂಬಂಧವಿಲ್ಲ : ಶಾಸಕ ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಡಿಜಿಪಿ ರವೀಂದ್ರನಾಥ್ ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ರೇಣುಕಾಚಾರ್ಯ, ಐಪಿಎಸ್ ಅಧಿಕಾರಿ ಡಿಜಿಪಿ ಡಾ.ರವೀಂದ್ರನಾಥ್ ರಾಜೀನಾಮೆಗೆ ನಾನು ಕಾರಣನಲ್ಲ. ನಾನು ಈಗಾಗಲೇ ಸ್ಪಷ್ಟವಾಗಿ ನಾನು ಯಾವುದೇ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದಿಲ್ಲ. ಹೊನ್ನಾಳಿ ತಾಲೂಕಿನ ಜನರು, ಹತ್ತು ಸಾವಿರಕ್ಕು ಹೆಚ್ಚು ಜನ ಸೇರಿ ಎಸ್ಎಸ್ಟಿ ಮೋರ್ಚಾ ಸಮಾವೇಶ ಮಾಡಿ, ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಅದಕ್ಕೆ ಉತ್ತರ ಕೊಟ್ಟಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಪ್ರತಿ ಹಳ್ಳಿಗಳಲ್ಲಿ ಅಂಬೇಡ್ಕರ್ ಜಯಂತಿಗೆ ನನ್ನನ್ನು ಆಹ್ವಾನ ಮಾಡಿದ್ದಾರೆ. ಅದರಲ್ಲಿ ನಾನು ಭಾಗವಹಿಸಿದ್ದೇನೆ. ಡಿಕೆ ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳಬೇಕು, ಈ ರೀತ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಈ ರೀತಿ ಸುಳ್ಳು ಹೇಳುತ್ತಾ ಹೋದರೆ ಮುಖ್ಯಮಂತ್ರಿಯಾಗಿ ಬಿಡುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಅದನ್ನು ಬಿಡಬೇಕು.

ಹತಾಶ ಮನೋಭಾವನೆಯಿಂದ ಕೀಳು ಮಟ್ಟದ ರಾಜಕಾತಣಕ್ಕೆ ಇಳಿಯುತ್ತೀರಿ. ಕ್ಷುಲ್ಲಕ ಹೇಳಿಕೆಯನ್ನು ಕೊಡುತ್ತಿದ್ದೀರಿ. ರವೀಂದ್ರ ಅವರು ಯಾಕೆ ರಾಜೀನಾಮೆ ಕೊಟ್ಟಿದ್ದಾರೆ, ಏನು ಎಂಬುದು ನನಗೆ ಯಾವುದೇ ಮಾಹಿತಿಯಿಲ್ಲ. ಆದರೆ ಇದಕ್ಕೆ ನಾನು ಕಾರಣನಲ್ಲ. ಮೊದಲು ಅದನ್ನು ಅರ್ಥ ಮಾಡಿಕೊಳ್ಳಬೇಕು. ಈ ರೀತಿ ನನ್ನ ಮೇಲಿನ ಆರೋಪವನ್ನು ಬಿಡಬೇಕು ಎಂದು ಒತ್ತಾಯ ಮಾಡುತ್ತೇನೆ. ಕಾಂಗ್ರೆಸ್ ನ ಅನೇಕ ಗುಂಪುಗಳಿವೆ ಎಬಿಸಿಡಿ ಹೀಗೆ . ಆದರೆ ಬಿಜೆಪಿ ಪಾರ್ಟಿಯಲ್ಲಿ ನಾವೆಲ್ಲಾ ಒಟ್ಟಾಗಿದ್ದೇವೆ. ಮುಂದಿನ ಚುನಾವಣೆಯಲ್ಲೂ ಒಟ್ಟಾಗಿ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನೀವೂ ಹಗಲು ಕನಸು ಕಾಣಬೇಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!