Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಡುಗಾಡು ಸಿದ್ದರಿಗೆ ನಿವೇಶನ ಹಂಚಿಕೆ,  ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ.16) : ಬಹುದಿನಗಳಿಂದ ಮೆದೇಹಳ್ಳಿ ಗ್ರಾಮದ ತಮಟಕಲ್ಲು ರಸ್ತೆಯಲ್ಲಿ ಡೇರೆ ಹೂಡಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಸೇರಿದ ಸುಡುಗಾಡು ಸಿದ್ದರ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ, ಚಿತ್ರದುರ್ಗ ಜಿಲ್ಲಾಡಳಿತ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿದೆ. ಈ ಜಾಗವನ್ನು ಬಯಲುಸೀಮೆ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿವೇಶನಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಶೀಘ್ರವಾಗಿ ಅತ್ಯಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಅಲೆಮಾರಿ ಕುಟುಂಬಗಳು ವಾಸಿಸಲು ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಸೋಮವಾರ ನಿವೇಶನ ಹಂಚಿಕೆ ಕುರಿತು ಮೆದೇಹಳ್ಳಿ ಹಾಗೂ ಇಂಗಳದಾಳ್ ಗ್ರಾಮ ಪಂಚಾಯಿತಿಗೆ ಸಂಬಂದಿಸಿದಂತೆ ಜರುಗಿದ
ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರಥಮ ಬಾರಿಗೆ ಅಲೆಮಾರಿ ಜನಾಂಗದವರನ್ನು ಗುರುತಿಸಿ ಶಾಶ್ವತ ನೆಲೆ ಕಲ್ಪಿಸಲಾಗುತ್ತಿದ್ದು, ಒಟ್ಟು 58 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಖಾಸಗಿ ಜಾಗದಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸುಡುಗಾಡು ಸಿದ್ದರ ಕುಟುಂಬಗಳು15 ದಿನನದಲ್ಲಿ ಸರ್ಕಾರದಿಂದ ಮಂಜೂರು ಮಾಡಿರುವ ಜಾಗಕ್ಕೆ ಸ್ಥಳಾಂತರವಾಗಲಿದ್ದಾರೆ ಎಂದರು. ಅಧಿಕಾರಿಗಳು ಶೀಘ್ರವಾಗಿ ಲೇಔಟ್ ವಿನ್ಯಾಸವನ್ನು ಪೂರ್ಣಗೊಳಿಸಬೇಕು. ಸ್ಥಳಾಂತರಗೊಳ್ಳುವ ಕುಟುಂಬಗಳಿಗೆ ಕುಡಿಯುವ ನೀರಿನ ಸಲುವಾಗಿ ಎರಡು ಕೊಳವೆ ಬಾವಿಗಳನ್ನು ಕೊರೆಯವಂತೆ ಸಂಬಂದಪಟ್ಟ ಅಧಿಕಾರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.

ಅಲೆಮಾರಿಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅಲೆಮಾರಿ ಜನಾಂಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಮಕ್ಕಳನ್ನು ಇಂಗಾಳದಾಳ್ ಶಾಲೆಗೆ ಸೇರಿಸಿ, ಇಂಗಳದಾಳು ಗ್ರಾಮದಲ್ಲಿ ಪಡಿತರ ವಿತರಣಾ ಕೇಂದ್ರದಲ್ಲಿ ಪಡಿತರ ವಿತರಿಸಲಾಗುವುದು. ಮಂಜೂರಾದ ಜಾಗದಲ್ಲಿ ತಾತ್ಕಾಲಿಕವಾಗಿ ವಾಸಿಸಿ. ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ನಿವೇಶನ ಹಾಗೂ ಮನೆಗಳನ್ನು ನಿಷ್ಪಕ್ಷಪಾತವಾಗಿ ಮಂಜೂರಾತಿಯನ್ನು ಮಾಡಲಾಗುವುದು. ಅಧಿಕಾರಿಗಳು ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು‌ ಶಾಸಕ ತಿಪ್ಪಾರೆಡ್ಡಿ ಸುಡುಗಾಡು ಸಿದ್ದ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬಯಲುಸೀಮೆ ಪ್ರಾದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ, ಕಾರ್ಯದರ್ಶಿ ಡಾ.ಶ್ರೀಧರ ಭಿ.ಭಜಂತ್ರಿ, ತಾಲೂಕು ಪಂಚಾಯತಿ ವಸತಿ ಯೋಜನೆ ನೋಡಲ್ ಅಧಿಕಾರಿ ಲೋಕೇಶ್, ಮೆದೇಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಧನ್ಯಕುಮಾರ್, ಸದಸ್ಯರಾದ ತಿಮ್ಮಣ್ಣ, ಜಯರಾಮ್ ರೆಡ್ಡಿ, ರಮೇಶ್ ಮೂಕುರು, ಸುಲೋಚನಮ್ಮ, ಪ್ರಿಯದರ್ಶಿನಿ, ಮಮತ, ವನಜಾಕ್ಷಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್, ಇಂಗಳದಾಳ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾಶ್ರೀ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!