Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ.. ಎಷ್ಟು ವರ್ಷದ ಸಜೆಯಲ್ಲಿದ್ದ ಗೊತ್ತಾ..?

Facebook
Twitter
Telegram
WhatsApp

ನವದೆಹಲಿ: ರಾಜೀವ್ ಗಾಂಧಿ ಹಂತಕ ಎ ಜೆ ಪೆರಾರಿವಾಲನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಸುಮಾರು 31 ವರ್ಷಗಳಿಂದ ಜೈಲಿನಲ್ಲಿದ್ದ ಪೆರಾರಿವಾಲನ್ ಗೆ ಸುಪ್ರೀಂ ಕೋರ್ಟ್ ಇಂದು ಬಿಡುಗಡೆ ಆದೇಶ ಹೊರಡಿಸಿದೆ. ಆರ್ಟಿಕಲ್ 142ರ ಅಡಿಯಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ.

ಪೆರಾರಿವಾಲನ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾನೆ. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಕ್ಷಮದಾನ ಅರ್ಜಿಯ ವಿಚಾರಣೆ ಕೂಡ ನಡೆಯುತ್ತಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಬಿಡುಗಡೆಗೊಳಿಸಿದೆ.

ಪೆರಾರಿವಾಲನ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದನು. ನಾನು 31 ವರ್ಷಗಳಿಂದ ಜೈಲಿನಲ್ಲಿದ್ದೇನೆ, ನನ್ನನ್ನು ಬಿಡುಗಡೆ ಮಾಡಬೇಕು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದನು. ಮೇ 10 ರಂದು ಆತನ ಮೇಲಿನ ವಿಚಾರಣೆಯನ್ನು ಅಂತ್ಯಗೊಳಿಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಆರ್ಟಿಕಲ್ 142 ಅಡಿಯಲ್ಲು ಬಿಡುಗಡೆ ಮಾಡಲು ಸುಪ್ರೀಂ ಸೂಚಿಸಿದೆ.

ವಿಚಾರಣ ವೇಳೆ ರಾಜ್ಯಪಾಲರು ಸಂಪುಟದ ಅನುಮೋದನೆಯ ವಿರುದ್ಧವಾಗಿ ಹೋಗಬಹುದೇ ಎಂಬುದು ಕಾನೂನು ಮತ್ತು ಸಾಂವಿಧಾನಿಕ ಪ್ರಶ್ನೆಯಾಗಿದೆ. ಅಲ್ಲದೆ ಇದೊಂದು ಗಂಭೀರವಾದ ವಿಚಾರ. ಫೆಡರಲ್ ವ್ಯವಸ್ಥೆ ಮೇಲೆ ಪರಿಣಾಮವನ್ನು ಬೀರಬಹುದು. ಇದರಿಂದ ಒಕ್ಕೂಟ ವ್ಯವಸ್ಥೆ ನಾಶವಾಗಬಹುದು. ಯಾರೂ ಕಾನೂನಿಗಿಂತ ಮೇಲಲ್ಲ. ಸರ್ಕಾರದ ನಮ್ಮ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!