Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

34 ವರ್ಷದ ಹಿಂದಿನ ಪ್ರಕರಣಕ್ಕೆ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷನಿಗೆ ಒಂದು ವರ್ಷ ಜೈಲು ಶಿಕ್ಷೆ..!

Facebook
Twitter
Telegram
WhatsApp

ನವದೆಹಲಿ: ಸುಮಾರು 34 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಿದೆ. ಅದರಲ್ಲಿ ಪಂಜಾಬ್ ನ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

1988ರಲ್ಲಿ ರಸ್ತೆ ಜಗಳದಲ್ಲಿ ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವನ್ನಪ್ಪಿದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ಅವರನ್ನು ದೋಷಮುಕ್ತಗೊಳಿಸಿಲಾಗಿತ್ತು. ಒಂದು ಸಾವಿರ ದಂಡ ವಿಧಿಸಿ ಬಿಡಗಡೆ ಮಾಡಲಾಗಿತ್ತು. ಆದರೆ ಬಳಿಕ 2018ರಲ್ಲಿ ಮೃತರ ಕುಟುಂಬಸ್ಥರು ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಕೂಡ ಮರು ಪರಿಶೀಳನಾ ಅರ್ಜಿಯನ್ನು ಕೈಗೆತ್ತಿಕೊಂಡಿತ್ತು. ಸದ್ಯ ಸುಪ್ರೀಂ ಕೋರ್ಟ್ ಆದೇಶದಂತೆ ಶಿಕ್ಷೆಗೆ ಗುರಿ ಮಾಡಲು ಪಂಜಾಬ್ ಪೊಲೀಸರು ಸಿಧುನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ.

1999 ರಲ್ಲಿ, ಪಟಿಯಾಲದ ಸೆಷನ್ಸ್ ನ್ಯಾಯಾಲಯವು  ಸಿಧು ಮತ್ತು ಅವರ ಸಹಚರರನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ 2006 ರಲ್ಲಿ  ಸಿಧುವನ್ನು ತಪ್ಪಿತಸ್ಥ ನರಹತ್ಯೆಯ ಅಪರಾಧಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

2018 ರಲ್ಲಿ ಸಿಧು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಒಂದೇ ಏಟಿಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದ  ಸುಪ್ರೀಂಕೋರ್ಟ್  ಹಿರಿಯ ನಾಗರಿಕರಿಗೆ ನೋವುಂಟು ಮಾಡಿದ  ಕಾರಣಕ್ಕೆ ಸಿಧುವನ್ನು ತಪ್ಪಿತಸ್ಥ ಎಂದು ಪರಿಗಣಿಸಿತು. ಸಿಧುಗೆ ಜೈಲು ಶಿಕ್ಷೆ ಮತ್ತು ₹ 1,000 ದಂಡ ವಿಧಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!