Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್, ಮಾಜಿ -ಹಾಲಿ ನಾಯಕರ ಗುದ್ದಾಟ..!

Facebook
Twitter
Telegram
WhatsApp

ತುಮಕೂರು: ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಕಿತ್ತಾಟ ಶುರುವಾಗಿದೆ. ಕುಣಿಗಲ್ ನಲ್ಲಿ ಹಾಲಿ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ರಾಮಸ್ವಾಮಿಗೌಡ ನಡುವೆ ಟಿಕೆಟ್ ಫೈಟ್ ಶುರುವಾವಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮೇಲೆಯೇ ಮಾಜಿ ಶಾಸಕ ರಾಮಸ್ವಾಮಿಗೌಡ ಗರಂ ಆಗಿದ್ದಾರೆ.

ಈ ಸಂಬಂಧ ಮಾತನಾಡಿರುವ ರಾಮಸ್ವಾಮಿ ಗೌಡ, ಟಿಕೆಟ್ ಸಿಕ್ಕಿಲ್ಲ ಎಂದರು ನಾನು ಸ್ಪರ್ಧಿಸುತ್ತೇನೆ. ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಹಾಲಿ ಮಾಜಿ ಎಂಬುದು ಬರುವುದಿಲ್ಲ, ಸಂಬಂಧಿ ಎನ್ನುವುದು ಬರಬಹುದು. ಟಿಕೆಟ್ ಸಿಕ್ಕಿಲ್ಲ ಎಂದರೂ ನಾನು ನಿಂತೆ ನಿಲ್ಲುತ್ತೇನೆ ಗೆದ್ದೆ ಗೆಲ್ಲುತ್ತೇನೆ, ಎಂಎಲ್ಎ ಆಗುತ್ತೇನೆ ಎಂದು ರೆಬೆಲ್ ಆಗಿದ್ದಾರೆ.

ಅವರಿಗೆ ನಾನು ಒಂದು ಎರಡು ಮೂರು ಅಂತ ಚಾನ್ಸ್ ಕೊಟ್ಟುಬಿಟ್ಟಿದ್ದೀನಿ. ಅವರ ಮನಸ್ಸಲ್ಲಿ ಅದು ಉಳಿಯಬೇಕಿತ್ತು. ಚುನಾವಣೆಗೆ ನಿಂತೇ ನಿಲ್ಲುತ್ತೇನೆ. ನನಗೆ ಕಾಂಗ್ರೆಸ್ ಬಲವಿದೆ ಎನ್ನುತ್ತಾರೆ. ಬಿಜೆಪಿ ಆರ್ಭಟದಲ್ಲಿ ತುಮಕೂರು ಸಿಟಿ ಯಾವ ರೀತಿ ಆಗುತ್ತೆ ಎಂಬುದು ಗೊತ್ತಿಲ್ಲ. ಮುದ್ದಹನುಮೇಗೌಡರನ್ನೇ ತಗೋಳ್ತಾ ಇದ್ದೀರಿ. ನಾನು ಕೂಡ ಅವರಂತೆ ಶಾಸಕ ಇದ್ದೀನಿ. ನನಗೂ ಸಿದ್ದರಾಮಣ್ಣ, ಡಿಕೆ ಶಿವಕುಮಾರ್ ಪ್ರಾಮಿಸ್ ಮಾಡಿದ್ದರು. ಟಿಕೆಟ್ ಕೂಡ ಅನೌನ್ಸ್ ಆಗಿತ್ತು. ಆದರೆ ಅನೌನ್ಸ್ ಆಗಿರುವ ಟಿಕೆಟ್ ಮತ್ತೆ ಬದಲಾಯಿಸಿದ್ರು. ಬಳಿಕ ನನಗೆ ಪ್ರಾಮಿಸ್ ಮಾಡಿದ್ದರು. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡ್ತೀನಿ ಅಂತ. ಈಗ ಮುಂದಿನ ಚುನಾವಣೆ ಬಂತಲ್ಲ ನೋಡ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!