Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾ ನ್ಯಾಯಾಲಯದಲ್ಲಿ ಇಂದಿನಿಂದ ಆರಂಭವಾದ ಜ್ಞಾನವಾಪಿ ಮಸೀದಿ ಕೇಸ್: ಶಿವಲಿಂಗದ ಬಗ್ಗೆ ಮುಸ್ಲಿಂ ಪರ ವಕೀಲ ಹೇಳಿದ್ದೇನು..?

Facebook
Twitter
Telegram
WhatsApp

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ್ ಪತ್ತೆಯಾದ ಬಗ್ಗೆ ಸೆಷನ್ ನ್ಯಾಯಾಲಯ ನೇಮಿಸಿದ್ದ ಸಮಿತಿಯೂ ವಿಡಿಯೋ ಸರ್ವೆ ಮಾಡಿ, ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಪ್ರಕರಣ ಸಂಬಂಧ ಇಂದಿನಿಂದ ವಿಚಾರಣೆ ಆರಂಭಿಸಿರುವ ಜಿಲ್ಲಾ ಸತ್ರ ನ್ಯಾಯಾಲಯ ಮುಸ್ಲಿಂ ಹಾಗೂ ಹಿಂದೂ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿದೆ.

ಶಿವಲಿಂಗ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂರ ಅರ್ಜಿ ವಿಚರಣೆ ನಡೆಸಿದ ಕೋರ್ಟ್, ನ್ಯಾ. ಅಜಯ್ ಕೃಷ್ಣ ವಿಶ್ವೇಶ್ವ ನೇತೃತ್ವದ ಪೀಠದಲ್ಲಿ ವಿಚಾರಣೆ ಆರಂಭವಾಗಿದೆ. ಸುಮಾರು ಒಂದು ಗಂಟೆಗಳ ಕಾಲ ವಾದ ಪ್ರತಿವಾದ ನಡೆದಿದೆ.

ಮೊದಲು ಮುಸ್ಲಿಂ ಪರ ವಕೀಲರು ವಾದ ಆರಂಭಿಸಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಅದಕ್ಕೆ ಯಾವ ಅಸ್ತಿತ್ವವೂ ಇಲ್ಲ. ಇದು ಜನರಲ್ಲಿ ಗೊಂದಲ ಉಂಟು ಮಾಡಿದೆ. ಅದು ಶಿವಲಿಂಗದ ಅಸ್ತಿತ್ವವೆಂದು ಸಾಬೀತಾಗುವವರೆಗೂ ಯಾವುದಕ್ಕೂ ಅನುಮತಿಸಬಾರದು ಎಂದು ವಾದ ಮಂಡಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ಹಿಂದೂ ಪರ ವಕೀಲರು, ಮಸೀದಿಯೊಳಗೆ ಪತ್ತೆಯಾದ ಶಿವಲಿಂಗವನ್ನು ಹಾಳು ಮಾಡಿದ್ದಾರೆ. ಅದರ ಸ್ವರೂಪವನ್ನೇ ಬದಲಿಸಿದ್ದಾರೆ. ಲಿಂಗವನ್ನು ಕೊರೆದು ಕಾರಂಜಿ ರೂಪದಲ್ಲಿ ಕಾಣುವಂತೆ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. ಎರಡು ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!