Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನಿದು ಮಂಗಳೂರಿನ ಹಿಜಾಬ್ ಗಲಾಟೆ : ಆಡಳಿತ ಮಂಡಳಿ ರೂಲ್ಸ್ ಗೂ ನೋ ಅಂದ್ರಾ ವಿದ್ಯಾರ್ಥಿನಿಯರು..!

Facebook
Twitter
Telegram
WhatsApp

ಮಂಗಳೂರು: ಪರೀಕ್ಷೆ ಮುಗಿದು ಮತ್ತೆ ಶಾಲಾ ಕಾಲೇಜುಗಳು ಆರಂಭವಾಗಿದ್ದೆ ತಡ ಮತ್ತೆ ಈ ಹಿಜಾಬ್ ಗಲಾಟೆ ಆರಂಭವಾಗಿದೆ. ಹೈಕೋರ್ಟ್ ಸೂಚನೆಯಂತೆ ಎಲ್ಲಾ ಶಾಲಾ ಕಾಲೇಜುಗಳು ಧಾರ್ಮಿಕ ವಸ್ತ್ರ ಧರಿಸಿ ಬರುವಂತಿಲ್ಲ ಎಂಬ ಸೂಚನೆಯನ್ನು ನೀಡಿದೆ. ಆದರೂ ಕೆಲ ವಿದ್ಯಾರ್ಥಿಗಳು ಮಾತ್ರ ತಮ್ಮ ಹಠ ಬಿಡುತ್ತಿಲ್ಲ. ಆಡಳಿತ ಮಂಡಳಿ ಸೂಚನೆಯನ್ನು ಮೀರಿ ಹಿಜಾಬ್ ಧರಿಸಿ ಬರುವ ಪ್ರಯತ್ನ ನಡೆಸುತ್ತಿದ್ದಾರೆ.

ಇದೀಗ ಮಂಗಳೂರಿನ ವಿಶ್ವವಿದ್ಯಾಲಯದಲ್ಲಿ ಹದಿನೈದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಎಂಟ್ರಿಯಾಗಿದ್ದಾರೆ. ಆದರೆ ಕಾಲೇಜು ಒಳಗೆ ಅನುಮತಿ ನೀಡದ ಕಾರಣ ಲೈಬ್ರರಿಗೆ ಹೋಗಲು ಯತ್ನಿಸಿದ್ದಾರೆ. ಅಲ್ಲಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತಡೆದಿದ್ದಾರೆ.

ಇಂಥ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಕಾಲೇಜು ಒಳಗೆ ಬರಲು ಎಷ್ಟೆ ಮನವೊಲಿಸುವ ಪ್ರಯತ್ನ ನಡೆಸಿದರು, ವಿದ್ಯಾರ್ಥಿನಿಯರು ಒಪ್ಪಲಿಲ್ಲ. ಕಡೆಗೆ ಕಾಲೇಜು ಆವರಣದಲ್ಲಿಯೇ ಕುಳಿತು ಪುಸ್ತಕ ಓದುತ್ತಿದ್ದದ್ದು ಕಂಡು ಬಂದಿದೆ. ಇದೆಲ್ಲವನ್ನು ಗಮನಿಸಿದ ಕಾಲೇಜು ಆಡಳಿತ ಮಂಡಳಿ ಕಡೆಗೆ ಡಿಸಿ ಮೊರೆ ಹೋಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!