Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವಸಂಸ್ಥೆಯ ಕರೆಯನ್ನು ತಿರಸ್ಕರಿಸಿದ ತಾಲಿಬಾನ್ : ಹೆಣ್ಣುಮಕ್ಕಳ ವಿಚಾರದಲ್ಲಿ ತಾಲಿಬಾನ್ ನಿಲುವೇನು..?

Facebook
Twitter
Telegram
WhatsApp

ಅಫ್ಘಾನಿಸ್ತಾನ: ಇಲ್ಲಿನ ತಾಲಿಬಾನ್ ಸರ್ಕಾರ ಮೊದ ಮೊದಲಿಗೆ ಸಡಿಲ ಬಿಟ್ಟು ಈಗ ಹೆಣ್ಣು ಮಕ್ಕಳ ಮೇಲೆ ಸಾಕಷ್ಟು ನಿಯಮವನ್ನು ಹೇರುತ್ತಿದೆ. ಹೆಣ್ಣು ಮಕ್ಕಳ ಮೇಲೆ ಕಠಿಣ ನಿಯಮಗಳನ್ನು ಹಾಕಿದ್ದು, ಆ ನಿಯಮ ಸಡಿಲಗೊಳಿಸುವಂತೆ ವಿಶ್ವಸಂಸ್ಥೆ ಕೂಡ ಸೂಚನೆ ನೀಡಿತ್ತು. ಆದರೆ ವಿಶ್ವಸಂಸ್ಥೆಯ ಕರೆಗೂ ಕ್ಯಾರೆ ಎಂದಿಲ್ಲ ತಾಲಿಬಾನ್.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರೆಯನ್ನು ತಿರಸ್ಕರಿಸಿರುವ ತಾಲಿಬಾನದ ವಿದೇಶಾಂಗ ಸಚಿವಾಲಯ, ಅಫ್ಘಾನಿಸ್ತಾನದ ಜನ ಪ್ರಬಲವಾಗಿ ಮುಸ್ಲಿಂರಾಗಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ಇಸ್ಲಾಂ, ಹಿಜಾಬ್ ಅನ್ನು ಸಮಾಜದ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳಿಗೆ ಅನುಗುಣವಾಗಿ ಪರಿಗಣಿಸುತ್ತದೆ ಎಂದು ತಾಲಿಬಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹರ್ ಬಾಲ್ಟಿ ತಿಳಿಸಿದ್ದಾರೆಂದು ವರದಿಯಾಗಿದೆ.

ತಾಲಿಬಾನ್ ಸರ್ಕಾರ, ಮಹಿಳೆಯರ ಶಿಕ್ಷಣ, ಉದ್ಯೋಗ, ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ವಿಚಾರಗಳು ಸೇರಿದಂತೆ ಮಹಿಳೆಯರ ಮೇಲೆ ಹಲವು ನಿರ್ಬಂಧ ಹೇರಿದೆ. ಅದರಲ್ಲೂ ಸಂಪೂರ್ಣ ದೇಹ ಮುಚ್ಚಿಕೊಳ್ಳುವಂತೆ ಬುರ್ಖಾ ಧರಿಸಬೇಕೆಂದು ಸೂಚಿಸಿದೆ. ಹೀಗಾಗಿ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುವ ನೀತಿಗಳನ್ನು ತಕ್ಷಣವೇ ತೆಗೆದು ಹಾಕಬೇಕೆಂದು ವಿಶ್ವಸಂಸ್ಥೆ ಸೂಚಿಸಿತ್ತು. ಆದರೆ ಅದನ್ನು ತಾಲಿಬಾನ್ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!