Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಪ್ರೆಷನ್ ಮಾತ್ರೆ ಬದಲು.. ಕ್ಯಾನ್ಸರ್ ಮಾತ್ರೆ ನೀಡಿದರಾ : ಏನಿದು ಹುಬ್ಬಳ್ಳಿ ಮೆಡಿಕಲ್ ಸಮಸ್ಯೆ..?

Facebook
Twitter
Telegram
WhatsApp

ಹುಬ್ಬಳ್ಳಿ: ಡಾಕ್ಟರ್ ಆಗಲಿ, ಮೆಡಿಕಲ್ ನವರಾಗಲಿ ಕೊಂಚ ಎಚ್ಚರ ತಪ್ಪಿದರೆ ಅದರಿಂದಾಗುವ ಅಪಾಯ ಅಷ್ಟಿಷ್ಟಲ್ಲ. ಅದು ಪ್ರಾಣಕ್ಕೂ ಕುತ್ತು ಬರುತ್ತದೆ. ಇದೀಗ ಅದಲು ಬದಲು ಮಾತ್ರೆಯಿಂದ ವ್ಯಕ್ತಿಯೊಬ್ಬನ ಪ್ರಾಣ ಹೋಗಿರುವ ಆರೋಪ ಮೆಡಿಕಲ್ ಮೇಲೆ ಬಂದಿದೆ.

ಧಾರಾವಾಡದ ಡಾ. ಒಅಂಡುರಂಗು ಬಳಿಗೆ ಕಾರವಾರದ ಅಜ್ಜುಹಳ್ಳಿಯ ಹನುಮಂತಪ್ಪ ಪಾಟೀಲ್ ಎಂಬುವವರನ್ನು ಕರೆದುಕೊಂಡು ಹೋಗಲಾಗಿತ್ತಂತೆ. ಖಿನ್ನತೆಗೆ ಒಳಗಾಗಿದ್ದ ಹನುಮಂತಪ್ಪ ಅವರಿಗೆ ಡಿಪ್ರೆಶನ್ ಮಾತ್ರೆಯನ್ನು ವೈದ್ಯರು ಬರೆದುಕೊಟ್ಟಿದ್ದರಂತೆ. ಹನುಮಂತಪ್ಪ ಪುತ್ರ ಪ್ರವೀಣ್ ಅಲ್ಲೆ ಇದ್ದ ಮೆಡಿಕಲ್ ಶಾಪ್ ಗೆ ಹೋಗಿ ಮಾತ್ರೆ ಕೇಳಿದಾಗ ಈ ಕಂಪನಿಯದ್ದಿಲ್ಲ, ಬೇರೆ ಕಂಪನಿಯದ್ದು ಕೊಡಲಾ ಎಂದಿದ್ದಾರೆ.

ಮಗ ಕೂಡ ಮೆಡಿಕಲ್ ನವರು ಹೇಳಿದಂತೆ ಆ ಮಾತ್ರೆಗಳನ್ನೇ ತೆಗೆದುಕೊಂಡು ಹೋಗಿದ್ದಾರೆ. 12 ದಿನ ಅದೇ ಮಾತ್ರೆಗಳನ್ನು ನೀಡಿದ್ದಾರೆ. ಆದರೆ ದಿನನ ಕಳೆದಂತೆ ಅನಾರೋಗ್ಯ ಹೆಚ್ಚಾಗಿದೆ. ಬಳಿಕ ಆಸ್ಪತ್ರೆಗೆ ಅದೇ ವೈದ್ಯರ ಬಳಿ ಕರೆದುಕೊಂಡು ಹೋದಾಗ ಡಿಪ್ರೆಶನ್ ಮಾತ್ರೆ ಬದಲು, ಕ್ಯಾನ್ಸರ್ ಮಾತ್ರೆ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಬಳಿಕ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ದೇಹದ ಒಳಗೆ ಸಂಪೂರ್ಣ ಹಾಳಾಗಿದ್ದ ಕಾರಣ ಹನುಮಂತಪ್ಪ ಮೃತಪಟ್ಟಿದ್ದಾರೆ. ಈ ಸಂಬಂಧ ಮೆಡಿಕಲ್ ಶಾಪ್ ವಿರುದ್ಧ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!