Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ : 6 ಮಂದಿ ಕಳ್ಳರ ಬಂಧನ, 9 ಲಕ್ಷ ಮೌಲ್ಯದ ವಾಹನಗಳ ವಶ

Facebook
Twitter
Telegram
WhatsApp

ಚಳ್ಳಕೆರೆ, (ಜೂ.02) : ತಾಲ್ಲೂಕಿನ ರಾಮಜೋಗಿಹಳ್ಳಿ ಸೇರಿದಂತೆ ವಿವಿಧೆಡೆ ಟ್ರಾಕ್ಟರ್ ಟ್ರೈಲರ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರು ಮಂದಿ ಕಳ್ಳರನ್ನು ಚಳ್ಳಕೆರೆ ಪೊಲೀಸರು ಬಂಧಿಸಿ, ಅವರಿಂದ 9 ಲಕ್ಷ ಮೌಲ್ಯದ ಟ್ರಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ರಾಮಜೋಗಿಹಳ್ಳಿ ಗ್ರಾಮದ ಮಾರುತಿಯವರಿಗೆ ಸೇರಿದ  ಸುಮಾರು 2,50,000 ರೂಪಾಯಿ ಮೌಲ್ಯದ ಟ್ರಾಕ್ಟರ್ ಟ್ರೈಲರನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದಾರೆಂದು ನೀಡಿದ ದೂರಿನ ಮೇರೆಗೆ ಚಳ್ಳಕೆರೆ ಪೊಲೀಸರು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದರು.

ಮೇ.31 ರಂದು ಬೆಳಿಗ್ಗೆ 4-30 ಗಂಟೆಗೆ ಚಳ್ಳಕೆರೆ ತಾಲ್ಲೂಕು ಕುರುಡಿಹಳ್ಳಿ
ಬಸ್ ನಿಲ್ದಾಣದ ಬಳಿ ಅನುಮಾನಸ್ಪದವಾಗಿ ಓಡಾಡಿಕೊಂಡಿದ್ದವರನ್ನು ವಿಚಾರಣೆ ನಡೆಸಿದಾಗ ರಾಮಜೋಗಿಹಳ್ಳಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ತಪ್ಪು ಒಪ್ಪಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಗಳನ್ನು,

1] ವಿಜಯ್ ತಂದೆ ಅಂಜಿನಮೂರ್ತಿ, 31 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು,
2] ಪುಟ್ಟು ತಂದೆ ಬಸವರಾಜಪ್ಪ, 24 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು,
3] ಸಂತೋಷ ತಂದೆ ಗೊರಪ್ಪ, 23 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು
4] ಕಾಂತರಾಜ್ ತಂದೆ ಈಶ್ವರಪ್ಪ, 24 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು
5] ಸುನೀಲ್ ತಂದೆ ಮಂಜಪ್ಪ, 22 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು
6] ವಿನಯ್ ತಂದೆ ಪರಶುರಾಮ್ 23 ವರ್ಷ, ಈಚಲನಾಗೇನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚಿತ್ರದುರ್ಗ ತಾಲ್ಲೂಕು
ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 9,00,000/- ರೂಪಾಯಿ
ಮೌಲ್ಯದ
1] ಟ್ರಾಕ್ಟ್ರರ್ ಇಂಜಿನ್
2] ಟ್ರಾಕ್ಟರ್ ಟ್ರೈಲರನ್ನು
ಹಾಗೂ ನೊಂದಣಿ ಸಂಖ್ಯೆಗಳಿಲ್ಲದ 02 ಟ್ರಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆ ನಡೆಸಲು
ಆರೋಪಿತರನ್ನು ಪತ್ತೆ ಮಾಡಲು ಮಾರ್ಗದರ್ಶನ ನೀಡಿ ಸಹಕರಿಸಿದ
ಚಳ್ಳಕೆರೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀಧರ್ ಮತ್ತು ಪೊಲೀಸ್ ನಿರೀಕ್ಷಕರಾದ ಜೆ.ಎಸ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಪಿ.ಎಸ್.ಐ ಸತೀಶ್ ನಾಯ್ಕ.ಕೆ ಹಾಗೂ ಸಿಬ್ಬಂದಿಗಳಾದ ಶ್ರೀನಿವಾಸ್,
ಹಾಲೇಶ, ಸತೀಶ್, ಮಂಜುನಾಥ ಮುಡಕೆ ಇವರುಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ಪರುಶುರಾಮ ಅವರು ಶ್ಲಾಘಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

SSLC ಫಲಿತಾಂಶ ಪ್ರಕಟ: ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್

    ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟ ಮಾಡಲಾಗಿದೆ. ರಾಜ್ಯಾದ್ಯಂತ 76.91 ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ವೆಬ್ಸೈಟ್ ಮೂಲಕವೂ ಫಲಿತಾಂಶವನ್ನು ನೋಡಬಹುದು. ಎಸ್ಎಸ್ಎಲ್ಸಿ ಫಲಿತಾಂಶ

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

error: Content is protected !!