Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಪುರದ ಶ್ರೀಶೈಲದಲ್ಲಿ ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ : ರಾತ್ರಿ ಬಸ್ ಚಾಲಕನಿಗೆ ಥಳಿಸಿದ ಪುಂಡರು..!

Facebook
Twitter
Telegram
WhatsApp

ವಿಜಯಪುರ: ಬೆಳಗಾವಿಯಲ್ಲಿ ಮರಾಠಿಗರು ಕನ್ನಡಿಗರ ಮೇಲೆ ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ವಿಜಯಪುರದ ಶ್ರೀಶೈಲದಲ್ಲೂ ಕನ್ನಡಿಗರನ್ನು ಗುರಿ ಮಾಡಿ, ಹಲ್ಲೆ ನಡೆಸುವುದಕ್ಕೆ ಆರಂಭಿಸಿದ್ದಾರೆ. ಕಳೆದ ಯುಗಾದಿ ಹಬ್ಬದ ಸಂಭ್ರಮದಲ್ಲೂ ಕನ್ನಡಿಗರ ಮೇಲೆ ಹಲ್ಲೆ ನಡೆಸಿ, ಕರ್ನಾಟಕದ ವಾಹನದ ಗಾಜು ಪುಡಿ ಪುಡಿ ಮಾಡಿದ್ದರು. ಇದೀಗ ಅಂಥ ಘಟನೆ ಪುನಃ ಮರುಕಳಿಸಿದೆ.

ಶ್ರೈಶೈಲದಲ್ಲಿ ವಿಜಯಪುರ ಡಿಪೋಗೆ ಸೇರಿದ ಬಸ್ ಮೇಲೆ ದಾಳಿ ನಡೆಸಿದ್ದಾರೆ. ಸರ್ಕಾರಿ ಬಸ್ ನ ಚಾಲಕ ಕಂ ನಿರ್ವಾಹಕ ಬಸವರಾಜ್ ಬಿರಾದರ್ ರಾತ್ರಿ ಊಟ ಮುಗಿಸಿ, ಬಸ್ ನಿಲ್ದಾಣದಲ್ಲಿಯ ಕಟ್ಟೆ ಮೇಲೆ ಹಾಗೇ ಮಲಗಿದ್ದರಂತೆ. ಅಲ್ಲಿಗೆ ಬಂದ ಪುಂಡರು ಏಕಾಏಕಿ ದಾಳಿ ನಡೆಸಿದ್ದಾರೆ. ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಸವರಾಜ್ ಚೀರಾಟ ಕೇಳಿಸಿಕೊಂಡ ಬೇರೆ ಚಾಲಕ, ನಿರ್ವಾಕರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಜನ ಬರುತ್ತಿದ್ದಂತೆ, ಪುಂಡರು ಕಾಲ್ಕಿತ್ತಿದ್ದಾರೆ.

ಅಷ್ಟೊತ್ತಿಗೆ ಬಸವರಾಜ್ ಬಿರಾದರ್ ಗೆ ಮುಖ, ಕಾಲಿನ ಭಾಗಕ್ಕೆ ಹೆಚ್ಚು ಗಾಯವಾಗಿದೆ. ರಕ್ತಸ್ರಾವ ಜಾಸ್ತಿಯಾಗಿತ್ತಂತೆ. 10-12 ಜನ ಬಸವರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡಿಗರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರಂತೆ. ಸದ್ಯ ಘಟನೆ ಸಂಬಂಧ ಶ್ರೀಶೈಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಸವರಾಜ್ ಬಿರಾದರ್ ಗೆ ಜೊತೆಗಾರರೆಲ್ಲಾ ಸೇರಿ ಚಿಕಿತ್ಸೆ ಕೊಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!