Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಸೋಲಾರ್ ದೀಪ ಕದಿಯುತ್ತಿರುವ ಕಳ್ಳರು ಜಾನುವಾರುಗಳ ತಲೆ ಜೋಡಿಸುತ್ತಿದ್ದಾರೆ..!

Facebook
Twitter
Telegram
WhatsApp

ಬೆಳಗಾವಿ: ಕಳ್ಳರ ಗಿಮಿಕ್ ಒಂದೊಂದು ಸಲ ಒಂದೊಂದು ರೀತಿಯಾಗಿರುತ್ತೆ. ಆದ್ರೆ ಸೋಲಾರ್ ದೀಪ ಕಳುವಿಗಾಗಿ ಬೆಳಗಾವಿಯಲ್ಲಿ ಕಳ್ಳರು ಬೇರೆ ರೀತಿಯಲ್ಲಿಯೆರ ನಡೆದುಕೊಂಡಿದ್ದಾರೆ. ಜಾನುವಾರುಗಳ ತಲೆ ಉಪಯೋಗಿಸಿ, ಸೋಲಾರ್ ದೀಪಗಳನ್ನು ಕದ್ದಿದ್ದಾರೆ.

ಗೋಕಾಕ್ ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಸೋಲಾರ್ ಲೈಟುಗಳ ಕಂಬಕ್ಕೆ ಜಾನುವಾರುಗಳ ಕೊಂಬು ಕಟ್ಟುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಕಂಬದಲ್ಲಿ ಜಾನುವಾರುಗಳ ಕೊಂಬು ಕಾಣಿಸುತ್ತಿದೆ. ಆದರೂ ಪೊಲೀಸರು ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಾಲ್ಸ್ ಪ್ರಸಿದ್ಧ ತಾಣ, ಅಲ್ಲಿ ಪ್ರವಾಸಿಗರ ಸಂಚಾರಕ್ಕಾಗಿ ಇಡೀ ರಸ್ತೆಯುದ್ಧಕ್ಕೂ ಸೋಲಾರ್ ಲೈಟ್ ಅಳವಡಿಸಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದ ಆ ಸೋಲಾರ್ ಲೈಟುಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಈ ಘಟನೆ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ. ಕಳ್ಳತನ ಮಾಡಿದವರು, ಜಾನುವಾರುಗಳ ಬುರುಡೆಗಳನ್ನು ನೇತಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದರು ಆ ಬುರುಡೆಗಳನ್ನು ತೆರವುಗೊಳಿಸಿಲ್ಲ ಎಂಬ ಬೇಸರ ಹೊರ ಹಾಕಿದ್ದಾರೆ.

ಆ ಸಾಲಿನಲ್ಲಿರುವ ಎರಡು ಮೂರು ಲೈಟ್ ಕಂಬದಲ್ಲಿ ಈ ರೀತಿ ಬುರುಡೆಗಳನ್ನು ನೇತಾಕಿ ಹೋಗಿದ್ದಾರೆ. ಇದು ಅಲ್ಲಿನ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ವಿದ್ಯುತ್ ದೀಪ ಕದ್ದಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲು ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

error: Content is protected !!