Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಎಸಿಬಿ ಬಲೆಗೆ

Facebook
Twitter
Telegram
WhatsApp

ಬಳ್ಳಾರಿ,(ಜೂ.06): ಬಳ್ಳಾರಿಯ ಕೇಂದ್ರ ತೆರಿಗೆ(ಜಿಎಸ್‌ಟಿ ವಿಭಾಗ) ಕಚೇರಿಯ ಅಧೀಕ್ಷಕ ಮಧುಸೂಧನ್ ಅವರು ವಿವಿಧ ಇಲಾಖೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ಒದಗಿಸುವ ಗುತ್ತಿಗೆದಾರ ಈಶ್ವರಯ್ಯ ಅವರ ಜಿಎಸ್‌ಟಿ ದಂಡದ ಹಣ ರದ್ದುಮಾಡಿ ಪ್ರಕರಣ ಮುಕ್ತಾಯ ಮಾಡಲು 80 ಸಾವಿರ ರೂ.ಗಳು ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದಾಗ ಸಿಬಿಐ(ಎಸಿಬಿ) ಬೆಂಗಳೂರು ಮತ್ತು ಬಳ್ಳಾರಿ ಎಸಿಬಿ ತಂಡಗಳು ಕ್ಷೀಪ್ರ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಮಧುಸೂದನ್ ಅವರನ್ನು ಖೆಡ್ಡಾಗೆ ಬಿಳಿಸುವಲ್ಲಿ ಯಶಸ್ವಿಯಾಗಿವೆ.

ಸಿಬಿಐ(ಎಸಿಬಿ) ಬೆಂಗಳೂರಿನ ವಿಶೇಷ ತಂಡವು ಮತ್ತು ಬಳ್ಳಾರಿಯ ಭ್ರಷ್ಟಾಚಾರ ನಿಗ್ರಹದಳ ತಂಡಗಳು ಸೋಮವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಕೇಂದ್ರ ತೆರಿಗೆ(ಜಿಎಸ್‌ಟಿ ವಿಭಾಗ) ಕಚೇರಿಯ ಅಧೀಕ್ಷಕ ಮಧುಸೂಧನ್ ಅವರನ್ನು ಬಲೆಗೆ ಬಿಳಿಸಿವೆ.

ಬಳ್ಳಾರಿ ನಗರದ ನಿವಾಸಿಯಾದ ಈಶ್ವರಯ್ಯ ತಂದೆ ಜಿ.ನರಸಿಂಹಯ್ಯ ಅವರು ವಿವಿಧ ಇಲಾಖೆಗಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ಒದಗಿಸುವ ಗುತ್ತಿಗೆದಾರರಾಗಿದ್ದರು. ಇವರ ಜಿಎಸ್‌ಟಿ ದಂಡದ ಹಣ ರದ್ದು ಮಾಡಿ ಪ್ರಕರಣ ಮುಕ್ತಾಯ ಮಾಡಲು ಈಶ್ವರಯ್ಯ ಅವರಿಗೆ ಕೇಂದ್ರ ತೆರಿಗೆ(ಜಿಎಸ್‌ಟಿ ವಿಭಾಗ) ಕಚೇರಿಯ ಅಧೀಕ್ಷಕ ಮಧುಸೂಧನ್ ಅವರು 80 ಸಾವಿರ ರೂ.ಗಳ ಬೇಡಿಕೆ ಇಟ್ಟಿದ್ದು,ಈ ಸಂಬAಧ ಸಿಬಿಐ(ಎಸಿಬಿ) ಬೆಂಗಳೂರು ಅವರಲ್ಲಿ ಪ್ರಕರಣ ದಾಖಲಾಗಿತ್ತು.

ಸಿಬಿಐ(ಎಸಿಬಿ) ಬೆಂಗಳೂರು ವಿಶೇಷ ತಂಡವು ಬಳ್ಳಾರಿಗೆ ಆಗಮಿಸಿ ಮಧುಸೂದನ್ ಅವರು ಲಂಚದ ಹಣ 80 ಸಾವಿರ ರೂ.ಗಳು ಸ್ವೀಕರಿಸುತ್ತಿದ್ದಾಗ ಯಶಸ್ವಿ ಟ್ರ್ಯಾಪ್ ಮಾಡಲಾಗಿದೆ.

ಈ ಕಾರ್ಯಾಚರಣೆಯು ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯ ಸಹಯೋಗ ಮತ್ತು ಸಹಕಾರದೊಂದಿಗೆ ಯಶಸ್ವಿಯಾಗಿದೆ ಎಂದು ಬಳ್ಳಾರಿ ಎಸಿಬಿ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!