Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬುದ್ದಿ ಮಾತು ಹೇಳಿದ್ದಕ್ಕೆ ಹಾಸನದಲ್ಲಿ ದೇವರ ವಿಗ್ರಹ ವಿರೂಪಗೊಳಿಸಿದ ವಿಕೃತಿಗಳು..!

Facebook
Twitter
Telegram
WhatsApp

ಹಾಸನ: ಇತ್ತೀಚೆಗೆ ದೇವರ ವಿಗ್ರಹಗಳನ್ನು ವಿರೂಪಗೊಳಿಸಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಸುದ್ದಿಯಾಗಿತ್ತು. ಇದೋಗ ಪೊಲೀಸರು ಆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಐತಿಹಾಸಿಕ ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿ ದೇವರ ವಿಗ್ರಹಗಳನ್ನು ವಿರೂಪಗೊಳಿಸಿದ್ದರು. ಬೆಟ್ಟದ ಈಜುಕೊಳ ಹಿಂಭಾಗ, ಶ್ರೀನಿವಾಸ ಕಲ್ಯಾಣ ಮ್ಯೂಸಿಯಂಗಾಗಿ ವಿಗ್ರಹಗಳನ್ನು ನಿರ್ಮಾಣ ಮಾಡಲಾಗಿತ್ತು. ಮೇ 31ರಂದು ಈ ಘಟನೆ ನಡೆದಿತ್ತು. ಬಳಿಕ ಪೊಲೀಸರಿಗೆ ದೂರು ಸಹ ನೀಡಲಾಗಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ಬಳಿಕ ಮಾಹಿತಿ ನೀಡಿರುವ ಎಸ್ಪಿ ಶ್ರೀನಿವಾಸ ಗೌಡ, ವಿಗ್ರಹಗಳನ್ನು ನಾಶ ಮಾಡಿದ ಐವರು ಆರೋಪಿಗಳು ಪ್ರತಿನಿತ್ಯ ಕಲ್ಯಾಣಿ ಬಳಿ ಈಜಲು ಹೋಗುತ್ತಿದ್ದರಂತೆ. ಬಳಿಕ ಅಲ್ಲಿಯೇ ಸಿಗರೇಟ್ ಕೂಡ ಸೇದುತ್ತಿದ್ದರಂತೆ. ವಿಗ್ರಹಗಳನ್ನು ಕೆತ್ತುವವರು ಈ ಸಂಬಂಧ ಪ್ರಶ್ನೆ ಮಾಡಿ, ಈ ರೀತಿ ಮಾಡಬೇಡಿ ಎಂದು ಬುದ್ಧಿ ಹೇಳಿದ್ದರಂತೆ. ಈ ಬುದ್ಧಿ ಮಾತನ್ನೇ ದ್ವೇಷವಾಗಿ ಬೆಳೆಸಿಕೊಂಡಿದ್ದ ಆ ಆರೋಪಿಗಳು, ಕೆಲಸಗಾರರು ಊಟಕ್ಕೆ ಹೋದಾಗ ಇಂಥ ಕೃತ್ಯವೆಸಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!