Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರ ಗೌರವವವನ್ನು ಅವರೇ ಹಾಳು ಮಾಡಿಕೊಳ್ಳುತ್ತಾರೆ : ಯಡಿಯೂರಪ್ಪ

Facebook
Twitter
Telegram
WhatsApp

 

ಬೆಳಗಾವಿ : ರಾಜ್ಯಸಭಾ ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು ಸದೆಬಡಿಯಲು ಜೆಡಿಎಸ್ ನಮಗೆ ಬೆಂಬಲ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ರೆ, ಜೆಡಿಎಸ್ ನಾಯಕರು ಕೂಡ ಅದನ್ನೇ ಹೇಳುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ನವರು ಮನಬಂದಂತೆ ಮಾತನಾಡುತ್ತಾರೆ. ಚುನಾವಣೆಯಲ್ಲಿ ಸೋಲು ನಿಶ್ಚಿತ ಅಂತ ಅವರಿಗೆ ಗೊತ್ತಾಗಿದೆ.

RSS ಬಗ್ಗೆ ಹಗುರವಾಗಿ ಮಾತನಾಡುವಂತದ್ದು, ಬೇರೆ ಬೇರೆ ವಿಷಯಕ್ಕೆ ಹಗುರವಾಗಿ ಮಾತನಾಡುವಂಥದ್ದು ಅವರಿಗೊಂದು ಚಟ ಆಗಿದೆ. ಇದರಿಂದ ಅವರಿಗೇನು ಲಾಭ ಆಗಲ್ಲ. ಅದರ ಬಗ್ಗೆ ವಿರೋಧ ಪಕ್ಷದ ನಾಯಕರ ಮೇಲಿನ ಗೌರವ, ಒಬ್ಬ ಮಾಜಿ ಮುಖ್ಯಮಂತ್ರಿಗಳಾಗಿ ಈ ರೀತಿ ಮಾತನಾಡುವುದ‌ನ್ನು ನೋಡಿದ ಜನ ಈಗಾಗಲೇ ಬೇಸತ್ತಿದ್ದಾರೆ. ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವುದಕ್ಕೆ ಅವರಿಗೆ ಸಂಪೂರ್ಣ ಸ್ವತಂತ್ರವಿದೆ. ಅವರ ಪಕ್ಷ ಬಲಪಡಿಸಲು ಅವರು ಪ್ರಯತ್ನ ಮಾಡುತ್ತಾರೆ ಎಂದಿದ್ದಾರೆ. ಇಲ್ಲಿ ಮುಖಂಡತ್ವದ ಪ್ರಶ್ನೆ ಇಲ್ಲ. ಸಾಮೂಹಿಕ ನೇತೃತ್ವದಲ್ಲಿ ಎಲ್ಲಾ ಕಡೆ ಪ್ರವಾಸ ಮಾಡುತ್ತೇವೆ. ಎಲ್ಲಾ ಚುನಾವಣೆಯಲ್ಲೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಮತದಾರರು ಮೋದಿ ಮತ್ತು ಬಿಜೆಪಿ ಜೊತೆಗಿರುವ ಕಾರಣ ನಮ್ಮ ಮುಂದಿನ ಚುನಾವಣೆಯ ಗೆಲುವಿಗೆ ಅಡ್ಡಿ ಆತಂಕವಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!