Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವ, ಕುವೆಂಪು ಎಂದರೆ ಕನ್ನಡ, ಇಬ್ಬರಿಗೂ ಅವಮಾನವಾದರೆ ಇದ್ದು ಏನು ಪ್ರಯೋಜನ: ಪಾದಯಾತ್ರೆ ಹೊರಟ ಹಂಸಲೇಖ

Facebook
Twitter
Telegram
WhatsApp

ಶಿವಮೊಗ್ಗ: ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣೆಯಾದ ಪಠ್ಯಪುಸ್ತಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಸವಣ್ಣ, ಅಲ್ಲಮಪ್ರಭು, ಕುವೆಂಪು, ಟಿಪ್ಪು ಸುಲ್ತಾನ ಅವರಿಗೆ ಏಕವಚನ ಬಳಸಿ ಅವಮಾನ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ. ರೋಹಿತ್ ಚಕ್ರತೀರ್ಥ ಮಾಡಿರುವ ಪಠ್ಯಗಳನ್ನು ಮಕ್ಕಳಿಗೆ ನೀಡುವುದು ಬೇಡವೆಂದು ಹೋರಾಟಗಳು ನಡೆಯುತ್ತಿವೆ. ಇದೀಗ ಹೊಸ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಾದಬ್ರಹ್ಮ ಹಂಸಲೇಖ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಪಠ್ಯಪುಸ್ತಕದಲ್ಲಿನ ದೋಷ ವಿರೋಧಿಸಿ ಕುಪ್ಪಳ್ಳಿಯಿಂದ ಸಾಂಸ್ಕೃತಿಕ ಸೌಹಾರ್ದ ನಡಿಗೆ ಶುರುವಾಗಿದೆ. ಕುಪ್ಪಳ್ಳಿಯಿಂದ ತೀರ್ಥಹಳ್ಳಿಯ ತನಕ ಈ ನಡಿಗೆ ನಡೆಯಲಿದೆ. ಈ ನಡಿಗೆಯಲ್ಲಿ ಪಾಲ್ಗೊಂಡಿರುವ ನಾದಬ್ರಹ್ಮ ಹಂಸಲೇಖ ಈ ಬಗ್ಗೆ ಮಾತನಾಡಿದ್ದು, ನಮಗೆ ಕನ್ನಡಕ್ಕೆ ಮಹಾಮನೆ ಕಲ್ಯಾಣದಲ್ಲಿ, ಕವಿಶೈಲದಲ್ಲಿ ಗುರುಮನೆ. ಈ ಗುರುಮನೆಯಿಂದ ಇಂದು ನಾವೂ ಒಂದು ಕಹಳೆ ಉದುತ್ತಾ ಇದ್ದೀವಿ. ಅದು ಕುಪ್ಪಳ್ಳಿ ಕಹಳೆ.

ಅವತ್ತು ಗೋಕಾಕ್ ಚಳುವಳಿ, ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಬೇಕು. ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿಲ್ಲಿದ್ದು ಏನು ಮಾಡಬೇಕು. ಬಸವ ಅಂದ್ರೆ ಕನ್ನಡ, ಕುವೆಂಪು ಅಂದ್ರೆ ಕನ್ನಡ, ಬಸವ ಅಂದ್ರೆ ಕರುನಾಡು, ಕುವೆಂಪು ಪುಟ್ಟಪ್ಪ ಎಂದರೆ ಕರ್ನಾಟಕ. ಈ ರೀತಿಯ ಅವಮಾನವಾದರೆ ನಾವಿದ್ದು ಏನು ಮಾಡುವುದು. ನಾಡೇ ಒಂದು ಗೀತೆ, ನಮ್ಮ ನಾಡೇ ಒಂದು ಧ್ವಜ. ಅವೆರಡಕ್ಕೂ ಅವಮಾನವಾದರೆ ನಾವಿದ್ದು ಏನು ಮಾಡುವುದು. ಕನ್ನಡದ ನಡ ಮುರಿಯುವ ನಡೆ ಕನ್ನಡ ನಾಡಲ್ಲಿ ಶುರುವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!