Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; ಬೈಕ್ ಕಳ್ಳನ ಬಂಧನ, 6 ಮೋಟಾರ್ ಸೈಕಲ್‍ಗಳ ವಶ

Facebook
Twitter
Telegram
WhatsApp

ಚಿತ್ರದುರ್ಗ, (ಜೂ.16) : ನಗರ ಸೇರಿದಂತೆ ವಿವಿಧೆಡೆ ಬೈಕ್‌ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ನಗರ ಪೊಲೀಸ್ ಠಾಣೆಯ ಪೊಲೀಸರು 6 ಮೋಟಾರ್ ಸೈಕಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೋಟಾರ್ ಸೈಕಲ್ ಕಳುವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯನ್ನು
ಪತ್ತೆ ಮಾಡಲು ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಾಂಡುರಂಗರವರ
ಮಾರ್ಗದರ್ಶನದಲ್ಲಿ ಚಿತ್ರದುರ್ಗ ನಗರ ಠಾಣೆಯ ಪಿ.ಐ. ನಯಿಮ್ ಅಹಮ್ಮದ್ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ  ಸೈಯದ್ ಸಿರಾಜುದ್ದಿನ್, ರಂಗಸ್ವಾಮಿ, ಮುಬಾರಕ್, ಶಿವರಾಜ್, ಮಧುಸೂಧನ್ ಜಿ.ಎನ್, ಬಿರೇಶ್ ಕೆ.ಬಿ ರವರವನ್ನೊಳಗೊಂಡ ತಂಡದವರು
ಪ್ರಕರಣದ ಅರೋಪಿಯಾದ ಮಂಜುನಾಥ್ ನನ್ನು (31 ವರ್ಷ) ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ
ಆವರಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಯು ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಸುಮಾರು 6 ಮೊಟಾರ್ ಸೈಕಲ್‍ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ
ತಿಳಿಸಿರುತ್ತಾನೆ.

ಆರೋಪಿತನಿಂದ ವಶಪಡಿಸಿಕೊಂಡಿರುವ ಮೋಟಾರ್ ಸೈಕಲ್‍ಗಳ ವಿವರ ಈ ಕೆಳಕಂಡಂತಿದೆ :

1) ಕೆ.ಎ.16.ಇ.ಎಸ್ 4242 ಹಿರೋ ಕಂಪನಿಯ ಸ್ಪೆಂಡರ್ ಪ್ಲಸ್ ಮೊಟಾರ್ ಸೈಕಲ್
2) ಕೆ.ಎ.16.ಇ.ಸಿ.3581 ನೇ ನಂಬರ್ ನ ಹಿರೋ ಕಂಪನಿಯ ಸ್ಪ್ಲೆಂಡರ್ ಪ್ಲಸ್ ಬೈಕ್
3) ಕೆ.ಎ17.ವೈ.6287 ಹಿರೋ ಕಂಪನಿಯ ಸ್ಪೆಂಡರ್ ಪ್ಲಸ್ ಬೈಕ್
4) ಕೆ.ಎ.17.ವೈ.7792 ಹಿರೋ ಹೊಂಡ ಕಂಪನಿಯ ಪ್ಯಾಷನ್ ಪ್ಲಸ್ ಬೈಕ್
5) ಕೆ.ಎ.16.ವಿ. 3164 ಹಿರೋ ಹೊಂಡಾ ಕಂಪನಿಯ ಸ್ಪ್ಲೆಂಡರ್ ಪ್ಲಸ್ ಬೈಕ್
6) ಕೆ.ಎ-16.ಇಜಿ 3596 ನೇ ನಂಬರ್ ನ ಹೊಂಡಾ ಕಂಪನಿಯ ಡಿಯೋ ಸ್ಕೂಟರ್ ಗಳಾಗಿದ್ದು ಇವುಗಳ ಅಂದಾಜು ಮೌಲ್ಯ ಸುಮಾರು-3,00,000/- ರೂಪಾಯಿ ಆಗಿರುತ್ತದೆ.

ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ತಂಡವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!