Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂರು ವರ್ಷ ನಾನು ವನವಾಸದಲ್ಲಿದ್ದೆ : ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಶ್ರೀನಾಥ್ ಹೇಳಿಕೆ

Facebook
Twitter
Telegram
WhatsApp

 

ಬೆಂಗಳೂರು: ಜೆಡಿಎಸ್ ತೊರೆದು ಎಚ್.ಆರ್.ಶ್ರೀನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗಂಗಾವತಿ ಕ್ಷೇತ್ರದ ತನ್ನ ನೂರಾರು ಬೆಂಬಲಿಗರ ಜೊತೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ಪಡೆಗೆ ಸೇರಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಎಚ್.ಆರ್.ಶ್ರೀನಾಥ್, ಮೂರು ವರ್ಷ ನಾನು ವನವಾಸದಲ್ಲಿದ್ದೆ. ಇದೀಗ ಮತ್ತೆ ನಾನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಮ್ಮ ರಕ್ತದಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಮ್ಮ ತಂದೆ ಇಂದಿರಾಗಾಂಧಿ ಅವರ ಅನುಯಾಯಿಗಳು. ಇಂದಿರಾಗಾಂಧಿ ಅವರು ಸುಮಾರು ಬಾರಿ ನಮ್ಮ ಮನೆಗೆ ಬಂದಿದ್ರು.

ಬಿಜೆಪಿ ಅವರು ಕೂಡ ನಂಗೆ ಕರೆದಿದ್ದರು. ಗೃಹ ಸಚಿವ ಅಮಿತ್ ಶಾ ಕೂಡ ನಂಗೆ ಕರೆ ಮಾಡಿ ಬಿಜೆಪಿಗೆ ಬನ್ನಿ ಅಂದಿದ್ರು. ನಮ್ಮ ತಂದೆ ಅವ್ರಿಗೆ ಅಲ್ಪಸಂಖ್ಯಾತ , ದಲಿತರು, ಬಡವ ಹಾಗೂ ವೀರಶೈವ ಸಮಾಜದ ಆಶಿರ್ವಾದ ಇದೆ. ಅದಕ್ಕಾಗಿ ನಂಗೆ ಬಿಜೆಪಿ ಪಕ್ಷಕ್ಕೆ ಹೋಗುವ ಮನಸ್ಸು ಆಗಲಿಲ್ಲ. ಗಂಗಾವತಿಯಲ್ಲಿ ಕೋಮು ಗಲಭೆ ಶುರುವಾಗಿದೆ. ಮಸೀದಿಯಲ್ಲಿ ಶಿವಲಿಂಗ ಇದೆ ಇಲ್ಲಿ ಇದು ಇದೆ ಅಂತ ಗಲಭೆಗಳು ಪ್ರಾರಂಭವಾಗಿವೆ. ನಾನು ಮುಸಲ್ಮಾನ ಪರವಾಗಿ ಜೋತೆಗೆ ಎಲ್ಲಾ ಧರ್ಮದವರ ಪರವಾಗಿ ಹೋರಾಟ ಶುರುಮಾಡಿದೇನೆ

ಬಿಜೆಪಿಗೆ ದೊಡ್ಡ ಅಸ್ತ್ರ ಅಂದ್ರೆ ಅದು ಅಂಜನಾದ್ರಿ ಬೆಟ್ಟ. ಅಯೋಧ್ಯೆ ಆದ್ಮೆಲೆ ದಕ್ಷಿಣ ಕನ್ನಡ ಭಾಗದಲ್ಲಿ ಅಂಜನಾದ್ರೀ ಇಟ್ಟಿಕೊಂಡಿ ಪ್ರವೇಶಮಾಡುವ ಕೆಲಸ ಬಿಜೆಪಿ ಮಾಡ್ತಿದೆ. ಅಂಜನಾದ್ರೀ ಪರ್ವತ ಕೇವಲ ಹಿಂದೂಗಳಿಗಲ್ಲ ಎಲ್ಲಾ ಸಮಾಜದವರಿಗೆ ಸೇರಿದ್ದು. ಅಂಜನಾದ್ರೀ ಪರ್ವತದಿಂದ ನಾವು ಬಿಜೆಪಿಯನ್ನು ದೂರ ಇಡುವ ಕೆಲಸ ಮಾಡುತೇವೆ.ನಾನು ಯಾವುದೇ ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಗೆ ಬಂದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!