Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತನ್ನ ಮೇಲಿನ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಸಿದ್ದು : ಬಿಜೆಪಿ ಟ್ವೀಟ್

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ‌ ಟ್ವೀಟ್ ಮಾಡಿದ್ದು, #CorruptCONgress ಎಂಬ ಹ್ಯಾಶ್ ಟ್ಯಾಗ್ ಬಳಸಿ ಸರಣಿ‌ ಟ್ವೀಟ್ ಮಾಡಿದೆ. ತಾನು ಬಹಳ ಸಚ್ಚಾರಿತ್ರ್ಯ ಹೊಂದಿದವರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಪುಂಖಾನುಪುಂಖ ಮಾತನಾಡುತ್ತಿದ್ದಾರೆ. ಅವರೇ ಸಿಎಂ ಆಗಿದ್ದಾಗಾ ಮಾಡಿದ್ದೇನು? ತಮ್ಮ ಮೇಲಿದ್ದ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಸಿದ್ದು. ಈ ಮಹರಾಯ! ತಾನು ಕಳ್ಳ, ಪರರ ನಂಬ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

 

 

ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಗೆ‌‌ ಮುಜುಗರ ಉಂಟು ಮಾಡಲು ಮುಂದಾದ ಬಿಜೆಪಿ. #CorruptCONgress ಎಂದು ಸರಣಿ ಟ್ವೀಟ್ ಮಾಡಿದೆ. ಟ್ವೀಟ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಚಾಟಿ ಬೀಸಿದೆ. ಕೈ ಪಕ್ಷ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ. ಪಕ್ಷದ ಅಧ್ಯಕ್ಷೆಯಿಂದ ಹಿಡಿದು ಚಾಮರಾಜಪೇಟೆಯ ಪುಢಾರಿ ಶಾಸಕನವರೆಗೂ ಸಾಲುಸಾಲಾಗಿ ಇ.ಡಿ. ಹಿಡಿತದಲ್ಲಿದ್ದಾರೆ. ಜಾಮೀನಿನ ಮೇಲೆ ಹೊರಬಂದು ಈಗ ಭ್ರಷ್ಟಾಚಾರದ ಬಗ್ಗೆ ಗಂಟಲು ಹರಿಯುವಂತೆ ಕೂಗುವುದು ಕೈಪಕ್ಷದ ಅಧೋಗತಿಯ ಸೂಚನೆ. ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ಮಾತ್ರ ನೀರು! ಕೈಪಕ್ಷದ ರಾಜ್ಯಾಧ್ಯಕ್ಷರಿಗೆ ಭ್ರಷ್ಚಾಚಾರದ ವಿರುದ್ಧ ಮಾತಾಡೋ ನೈತಿಕ ಅರ್ಹತೆಯೇ ಇಲ್ಲ. 317 ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ದಂಧೆ ಮಾಡಿರುವವರು, ಶಾಂತಿನಗರ ಗೃಹ ನಿರ್ಮಾಣ ಸೊಸೈಟಿಯ 1,456 ಕೋಟಿ ರೂ. ಮೊತ್ತದ ಆಸ್ತಿಗುಳುಂ ಮಾಡಿರುವವರು ಸುಭಗರಂತೆ ಬುಡಬುಡಿಕೆ ಮಾತುಗಳನ್ನಾಡುವುದು ಬದನೇಕಾಯಿ ತಿಂದು ವೇದಾಂತ ನುಡಿದಂತೆ.

ಇನ್ನು ಸಿದ್ದರಾಮಯ್ಯರದು ಸ್ಪ್ಲಿಟ್ ಪರ್ಸನಾಲಿಟಿ. ಪಕ್ಷದ ಪ್ರಣಾಳಿಕೆಯಲ್ಲಿ ಭಾಗ್ಯಗಳ ಪುಂಗಿ ಊದಿ ಆಶ್ವಾಸನೆ ಕೊಟ್ಟ ಧನರಾಶಿಯೇ ಬೇರೆ, ಸಮ್ಮಿಶ್ರ ಸರ್ಕಾರದ ಬಜೆಟ್ಟಿನಲ್ಲಿ ಆ ಭಾಗ್ಯಗಳಿಗೆ ಘೋಷಿಸಿದ ಪುಡಿಗಾಸು ರಾವಣಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ಸರಿ. ಇಷ್ಟೆಲ್ಲಾ ಹಳವಂಡಗಳ ಮೇಲೆ ಭಾಗ್ಯಗಳ ದುಡ್ಡನ್ನೂ ದೋಚಿದ್ದಾಯಿತು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

Arvind Kejriwal : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್.. ಮಧ್ಯಂತರ ಜಾಮೀನು ಮಂಜೂರು..!

ಸುದ್ದಿಒನ್ : ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 10) ಕೇಜ್ರಿವಾಲ್‌ಗೆ ಜೂನ್

error: Content is protected !!