Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ; ಮಧ್ಯಾಹ್ನ ಫ್ರೀಡಂ ಪಾರ್ಕ್ ಗೆ ಹೋಗಿ ಚರ್ಚಿಸುತ್ತೇನೆ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಆರೋಗ್ಯ ಇಲಾಖೆಯಲ್ಲಿ 21 ಸಾವಿರ ಸಿಬ್ಬಂದಿ ಗಳು ಕೆಲಸ ನಿರ್ವಹಣೆ ಮಾಡ್ತಾ ಇದಾರೆ. ಕೇಂದ್ರ ಸರ್ಕಾರದ ಅನುಧಾನದ ಕಾರ್ಯಕ್ರಮ ಇದು ಎಂದಿದ್ದಾರೆ.

 

ಈ ವಿಷಯದ ವಿಚಾರವಾಗಿ ಕೆಲವು ಸಿಬ್ಬಂದಿ ಗಳು ಹಲವು ಬೇಡಿಕೆ ಗಳನ್ನು ಇಟ್ಟುಕೊಂಡು ಫ್ರೀಡಂ ಪಾರ್ಕ್ ನಲ್ಲಿ ಕುಳಿತಿದ್ದಾರೆ. ಪ್ರತಿ ಸಿಬ್ಬಂದಿ ಮೇಲೆ ಕೂಡಾ ಸರ್ಕಾರಕ್ಕೆ ಗೌರವ ಇದೆ. ಕೋವಿಡ್ ಸಂಧರ್ಭದಲ್ಲಿ ಕೂಡಾ ಎಲ್ಲಾ ತ್ಯಾಗ ಮನೋಭಾವದಿಂದ ಕೆಲಸ ಮಾಡಿದ್ದಾರೆ. ನಮ್ಮ ಹಂತದಲ್ಲಿ ಏನೆಲ್ಲಾ ಸಾಧ್ಯತೆ ಗಳಿವೆ ಅವುಗಳ ಬಗ್ಗೆ ಈಗಾಗಲೆ ಚರ್ಚೆ ಮಾಡಿದ್ದೇನೆ.

ಇನ್ನೂ ಕೆಲವು ಬೇಡಿಕೆಗಳ ಬಗ್ಗೆ ಆರ್ಥಿಕ ಇಲಾಖೆ ಜೊತೆ ಮಾತನಾಡಬೇಕಿದೆ. ಇದು ಕೇಂದ್ರ ಸರ್ಕಾರದ ಅನುದಾನದ ಅಡಿ ನಡೆಯುವ ಕಾರ್ಯಕ್ರಮ ಆಗಿರುವುದರಿಂದ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಮಧ್ಯಾಹ್ನ ಒಂದು ಗಂಟೆಗೆ ನಾನು ಫ್ರೀಡಂ ಪಾರ್ಕ್ ಬಳಿ ಹೋಗುತ್ತೇನೆ. ಅವರ ಜೊತೆ ಚರ್ಚೆ ಮಾಡುತ್ತೇನೆ. ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ, ಎಷ್ಟು ಕಾಲದಿಂದ ಕಾರ್ಯ ನಿರ್ವಹಣೆ ಮಾಡ್ತಿದಾರೆ ಎಲ್ಲದರ ಬಗ್ಗೆಯೂ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!