Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮೋತ್ಸವ ವಿಚಾರಕ್ಕೆ ಬಿಜೆಪಿಗೆ ಹೊಟ್ಟೆ ಉರಿ ; ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಬಿಜೆಪಿಗೆ ಹೊಟ್ಟೆ ಉರಿ ಎಂಬ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ, ನಳೀನ್ ಕುಮಾರ್ ಕಟೀಲ್, ನನಗೆ ಬಹಳ ಖುಷಿಯಾಗುತ್ತಿದೆ. ಸಿದ್ದರಾಮಣ್ಣ ನಾಲ್ಕೈದು ಲಕ್ಷ ಜನ ಸೇರಿಸಬೇಕು. ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದಿದ್ದಾರೆ.

ನಮಗೇನು ಅದರಿಂದ ಹೊಟ್ಟೆಕಿಚ್ಚು ಇಲ್ಲ. ಸಿದ್ದರಾಮೋತ್ಸವ ಮಾಡ್ತಿರೋದು ಬಿಜೆಪಿ ವಿರುದ್ದ ಅಲ್ಲ. ಅದು ಡಿ.ಕೆ.ಶಿವಕುಮಾರ್ ವಿರುದ್ಧ, ಪಕ್ಷದಲ್ಲಿ ತನ್ನ ಅಸ್ತಿತ್ವ ವನ್ನು ಉಳಿಸಿಕೊಳ್ಳೋಕೆ. ಹೈಕಮಾಂಡ್ ಗೆ ತನ್ನ ಶಕ್ತಿ ತೋರಿಸಬೇಕು. ಮುಂದಿನ ಮುಖ್ಯಮಂತ್ರಿ ನಾನೇ ಅನ್ನೋದು. ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಡ ಹಾಕುವ ಪ್ರಯತ್ನವದು.

ಡಿ.ಕೆ.ಶಿವಕುಮಾರ್ ಮುಗಿಸುವ ಎರಡನೇ ಪ್ರಯತ್ನ ಇದು ಸಿದ್ದರಾಮಣ್ಣನ ತಂತ್ರಗಾರಿಕೆ. ಸಿದ್ದರಾಮಣ್ಣನವ್ರು ಮುಗಿಸಿಕೊಂಡೆ ಬಂದವ್ರು. ದೇವೇಗೌಡರನ್ನ ಮುಗಿಸಿದ್ರು,ಜನತಾ ದಳವನ್ನ ಮುಗಿಸಿದ್ರು. ಇಲ್ಲಿ ನಿಜವಾದ ಕಾಂಗ್ರೆಸ್ ನವ್ರನ್ನ ಹೊರಗಿಟ್ರು. ದಲಿತ ಸಿಎಂ ಅಭ್ಯರ್ಥಿ ಖರ್ಗೆ ಹೊರಹಾಕಿದ್ರು. ಮತ್ತೊಬ್ಬ ದಲಿತ ಪರಮೇಶ್ವರ್ ಸೋಲಿಸಿದ್ರು. ಈಗ ಡಿಕೆಶಿ ಮುಗಿಸುವ ತಂತ್ರಗಾರಿಕೆ ನಡಿತಿದೆ. ಇದರಿಂದ ನಮಗೆನೂ ಭಯ ಇಲ್ಲ. ಡಿ ಕೆ ಶಿವಕುಮಾರ್ ಗೆ ಭಯ ಅಷ್ಟೇ. ಡಿ.ಕೆ.ಶಿವಕುಮಾರ್ ನಿದ್ದೆಗೆಡಿಸುತ್ತದೆ. ಕಾಂಗ್ರೆಸಿಗರನ್ನ ನಿದ್ದೆಗೆಡಿಸುತ್ತದೆ. ನಾವು ಇನ್ನಷ್ಟು ಬೆಂಬಲ ಕೊಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!