Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೂ ತಿಳಿಸಿ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

Facebook
Twitter
Telegram
WhatsApp

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ನಗರಘಟ್ಟದಲ್ಲಿರುವ ಕರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಿಜೆಪಿ ವತಿಯಿಂದ ಗುರುವಾರ ಬೂತ್ ಸಮಿತಿ ಸಭೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಬೂತ್ ಸಮಿತಿ ಸಭೆಯಲ್ಲಿ ಚರ್ಚಿಸಿ ಕಳೆದ ಎರಡು ವರ್ಷಗಳಿಂದ ಇಡೀ ವಿಶ್ವವನ್ನೇ ಕೊರೋನಾ ಮಹಾಮಾರಿ ಕಾಡುತ್ತಿರುವ ಅಪಾಯಕಾರಿ ಪರಿಸ್ಥಿತಿಯಲ್ಲಿ ನಮ್ಮ ದೇಶದ ಪ್ರಧಾನಿ ನರೇಂದ್ರಮೋದಿರವರು ಪ್ರತಿ ಪ್ರಜೆಗೂ ಉಚಿತವಾಗಿ ಲಸಿಕೆ ನೀಡಿದ್ದರಿಂದ ಸಾವು-ನೋವಿನ ಪ್ರಮಾಣ ಕಡಿಮೆಯಾಗಿದೆ.

ರೈತರಿಗೆ ಉಪಯೋಗವಾಗುವ ಕಿಸಾನ್ ಸಮ್ಮಾನ್, ನಿರ್ಮಲ ಭಾರತ ಯೋಜನೆಯಡಿ ಗ್ರಾಮಗಳ ಪ್ರತಿ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು 14 ಸಾವಿರ ರೂ.ಗಳ ನೆರವು ಕೇಂದ್ರದಿಂದ ಸಿಕ್ಕಿದೆ. 109 ಕಾಯಿಲೆಗಳಿಗೆ ಔಷಧಿಗಳನ್ನು ನೀಡಲಾಗಿದೆ. ಇಷ್ಟೆಲ್ಲಾ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೂ ತಿಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಒಂದು ಕಾಲದಲ್ಲಿ ರೈತರ ಕೈಯಲ್ಲಿ ಬೀಜ ಗೊಬ್ಬರಕ್ಕೆ ಹಣವಿರುತ್ತಿರಲಿಲ್ಲ. ಬೇರೆಯವರ ಬಳಿ ಹೋಗಿ ಕೈಗಡ ಪಡೆಯಬೇಕಿತ್ತು. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಣ್ಣ ರೈತರ ನೆರವಿಗಾಗಿ ಕೇಂದ್ರ ಆರು ಸಾವಿರ, ರಾಜ್ಯ ನಾಲ್ಕು ಸಾವಿರ ರೂ.ಗಳನ್ನು ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಆಯುಷ್ಮಾನ್ ಕಾರ್ಡ್‍ನಿಂದಾಗುವ ಉಪಯೋಗ ಕುರಿತು ಬೂತ್ ಸಮಿತಿ ಸಭೆಯಲ್ಲಿ ಚರ್ಚಿಸಿ ಬೂತ್ ಸಮಿತಿಗಳು ಗಟ್ಟಿಯಾದರೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಹಾಗಾಗಿ ಸಕ್ರಿಯವಾಗಿ ಪಕ್ಷದ ಕೆಲಸದಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು.

ಬಿಜೆಪಿ ಯುವ ಮುಖಂಡ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಅನಿತ್ ಸಭೆಯಲ್ಲಿ ಚರ್ಚಿಸುತ್ತ ಮುಂದುವರೆದ ಅಮೇರಿಕಾ ದೇಶದಲ್ಲಿ ಜನರಿಗೆ ಕೋವಿಡ್ ವಿರುದ್ದ ಲಸಿಕೆ ನೀಡಲು ಹಣವಿಲ್ಲದಂತಾಗಿದೆ. ಅದೇ ನಮ್ಮ ದೇಶದಲ್ಲಿ ಪ್ರತಿ ಪ್ರಜೆಗೆ ಎರಡನೆ ಬಾರಿ ಲಸಿಕೆ ನೀಡಿ ಬೂಸ್ಟರ್ ಡೋಸ್‍ಗಳನ್ನು ಕೊಡಲಾಗಿದೆ. ಇದಕ್ಕೆ ದೇಶದ ಬಗ್ಗೆ ಪ್ರಧಾನಿ ಮೋದಿರವರಲ್ಲಿರುವ ಕಾಳಜಿಯೇ ಕಾರಣ ಎಂದು ಗುಣಗಾನ ಮಾಡಿದರು.

ಭಾರತದಲ್ಲಿ ಎಲ್ಲರಿಗೂ ಲಸಿಕೆ ನೀಡಿ ಉಳಿದ ಲಸಿಕೆಯನ್ನು ಮೋದಿರವರು ಅಮೇರಿಕಾಗೂ ಸರಬರಾಜು ಮಾಡಿದ್ದಾರೆಂದರೆ ನಮ್ಮ ದೇಶ ಎಷ್ಟು ಬಲಶಾಲಿಯಾಗಿದೆ ಎನ್ನುವುದನ್ನು ಬೂತ್ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳನ್ನು ಮುಟ್ಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರನ್ನು ಗುರುತಿಸಿ ಸರ್ಕಾರದ ಯೋಜನೆಗಳು ತಲುಪಿದೆಯೇ ಇಲ್ಲವೇ ಎನ್ನುವುದನ್ನು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ಬೂತ್ ಸಶಕ್ತ ಸಮಿತಿ ಜಿಲ್ಲಾ ಸಂಚಾಲಕ ಮಂಜು ಮಾಳಿಗೆ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಮಾಧ್ಯಮ ವಕ್ತಾರ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಉಸ್ತುವಾರಿ ದಗ್ಗೆ ಶಿವಪ್ರಕಾಶ್, ಹೊಳಲ್ಕೆರೆ ಮಂಡಲ ಪ್ರಧಾನ ಕಾರ್ಯದರ್ಶಿ ರೂಪ ಸುರೇಶ್, ಬೂತ್ ಸಶಕ್ತ ಸಮಿತಿ ಮಂಡಲ ಸಂಚಾಲಕ ಚಿತ್ರಹಳ್ಳಿ ದೇವರಾಜ್, ಯುವ ಮೋರ್ಚ ಮಂಡಲ ಅಧ್ಯಕ್ಷ ಅರುಣ್‍ನುಲೇನೂರ್, ಸುಶೀಲಭಾಯಿ ಸೇರಿದಂತೆ ನಗರಗಟ್ಟ ಗ್ರಾಮ ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!