Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರ ಶ್ರೀನಿವಾಸ್ ಮತ್ತು ಗುಬ್ಬಿ ಶ್ರೀನಿವಾಸ್ ಅಮಾನತಿಗೆ ಜೆಡಿಎಸ್ ನಿಯೋಗ ದೂರು..!

Facebook
Twitter
Telegram
WhatsApp

ಬೆಂಗಳೂರು: ಅಡ್ಡಮತದಾನ ಮಾಡಿದ ಇಬ್ಬರ ಮೇಲೆ ಜೆಡಿಎಸ್ ದೂರು ನೀಡಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರು ನೀಡಿದ್ದು, ಸ್ಪೀಕರ್‌ಗೆ 14 ಪುಟಗಳ ದೂರನ್ನು ನೀಡಿದೆ. ಕೋಲಾರ ಶ್ರೀನಿವಾಸ್, ಗುಬ್ಬಿ ಶ್ರೀನಿವಾಸ್ ಅವರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡುವಂತೆ ಜೆಡಿಎಸ್ ನಿಯೋಗ ದೂರು ನೀಡಿದೆ. ಜೆಡಿಎಸ್ ಹಿರಿಯ ನಾಯಕ ಹಾಗೂ ಶಾಸಕ ನಾಡಗೌಡ ಹಾಗೂ ಎಂಎಲ್ಸಿ ತಿಪ್ಪೇಸ್ವಾಮಿ ಅವರ ನಿಯೋಗದಿಂದ ದೂರು‌ ದಾಖಲಾಗಿದೆ.

ದೂರು ದಾಖಲಿಸಿದ ಬಳಿಕ ಮಾತನಾಡಿದ, ವೆಂಕಟರಾವ್ ನಾಡಗೌಡ, ಇಬ್ಬರು ಶಾಸಕರನ್ನ ಅನರ್ಹಗೊಳಿಸುವಂತೆ ದೂರು ನೀಡಿದ್ದೇವೆ. ಕಾಂಗ್ರೆಸ್ ಹೋಗೋದಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಜೆಡಿಎಲ್‌ಪಿ ಸಭೆಗೂ ಆಗಮಿಸಿಲ್ಲ. ಅಲ್ಲದೆ ನಾನು ಕಾಂಗ್ರೆಸ್ ಪ್ರೀತಿಸ್ತೇನೆ ಅಂತ ಬಹಿರಂಗ ಹೇಳಿಕೆ ನೀಡಿದ್ದಾರೆ.

ಹೀಗಾಗಿ ನಾನು, ವಕೀಲ ರಂಗನಾಥ್ ಹಾಗೂ ತಿಪ್ಪೇಸ್ವಾಮಿ ಹೋಗಿ ದೂರು ನೀಡಿದ್ದೇವೆ. ಕ್ರಮ ಕೈಗೊಳ್ಳೋದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ. ನಾವು ನಮ್ಮ ಕರ್ತವ್ಯ ಮಾಡಿದ್ದೇವೆ. ನಾವು ಫೈಟ್ ಮಾಡಿದ್ದೇವೆ, ದೂರು ಕೊಟ್ಟಿದ್ದೇವೆ. ನಮಗೆ ಪಾಸಿಟಿವ್ ಆಗಿ ಸ್ಪಂದಿಸಿದ್ದಾರೆ. ಪಕ್ಷದ ತೀರ್ಮಾನ ದೂರು ಕೊಡಬೇಕು ಅಂತ. ಕುಮಾರಸ್ವಾಮಿ ಅವರು ಸಾಕಷ್ಟು ದೂರು ಕೊಟ್ರು ಏನೂ ಆಗಿಲ್ಲ ಅಂತ ಹೇಳಿದ್ದಾರೆ. ಆದ್ರೆ ದೂರು ಕೊಡೋದು ಪಕ್ಷದ ತೀರ್ಮಾನವೇ ಆಗಿದೆ.

 

ಕೆ.ಹೆಚ್ ಮುನಿಯಪ್ಪ ಪಕ್ಷ ಸೇರ್ಪಡೆ ವಿಚಾರ. ನೋಡಿ ಕಾದು ನೋಡಿ, ಯಾರೆಲ್ಲಾ ಬರ್ತಾರೆ ಅಂತ. ಅವರು ಹಿರಿಯ ರಾಜಕಾರಣಿ, ಅವರ ಪಕ್ಷದಲ್ಲಿ ಅವರಿಗೆ ಗೌರವವಿಲ್ಲ ಎಂದು ಮುನಿಯಪ್ಪ ಅವರೇ ಹೇಳಿದ್ದಾರೆ. ಇನ್ನೂ ಮೂರು ನಾಲ್ಕು ತಿಂಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ.

ಗುಬ್ಬಿ ಶ್ರೀನಿವಾಸ್ ಬಾಯಿಗೆ ಬಂದಂತೆ ಅಂದಿದ್ದಾರೆ. ನಂತರ ಅರಿತುಕೊಂಡು ಕ್ಷಮೆ ಕೇಳಿದ್ದಾರೆ. ಮೊನ್ನೆ ಕೂಡ ರಾಜಣ್ಣ ಇಂತದ್ದೇ ಕೆಟ್ಟ ಹೇಳಿಕೆ ದೇವೇಗೌಡರ ಮೇಲೆ ಮಾಡಿದ್ರು. ಅವರಿಗೂ ವಯಸ್ಸಾಗುತ್ತೆ. ದೇವೇಗೌಡರು ದೇವೇಗೌಡರೇ. ಅವರು ಈ ಮಣ್ಣಿನಿಂದ ಪ್ರಧಾನಿಯಾಗಿದ್ದವರು. ಮುಂದೆ ಯಾರು ಆಗ್ತಾರೋ ಇಲ್ಲವೋ ಗೊತ್ತಿಲ್ಲ. ನೋಡೋಣ ರಾಜಣ್ಣ ಅವರೂ ಹಾಗೆ ಇರ್ತಾರಾ.? ಪಕ್ಷದ ಬಗ್ಗೆ ಬೇಸರ ಇದ್ರೆ ಪಕ್ಷ ಬಿಟ್ಟು ಹೋಗಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಹೇಳಬಾರದು.

 

ಈಗ ಕಾಂಗ್ರೆಸ್ ದೊಡ್ಡ ಪಕ್ಷ ಅಂತ ಹೋಗಿದಾರೆ. ಮುಂದೆ ಅವರ ಪರಿಸ್ಥಿತಿ ಏನಾಗುತ್ತೆ ನೋಡೋಣ. GT ದೇವೇಗೌಡರು ನಮ್ಮಲ್ಲೇ ಇರ್ತಾರೆ. ಅವರನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡ್ತೀವಿ. ಎಲ್ಲರಿಗೂ ನೋವಿದೆ, ಅವರ ಬಗ್ಗೆ ಗೌರವ ಕೂಡ ಇದೆ. ಅವರು ಮೊನ್ನೆ ರಾಜ್ಯಸಭೆ ಮತ ಕೂಡ ನಮ್ಮ ಅಭ್ಯರ್ಥಿಗೆ ಹಾಕಿದ್ದಾರೆ. ಅವರ ಮೇಲೆ ನಮಗೆ ವಿಶ್ವಾಸ ಇದೆ.

 

ಸಿದ್ದರಾಮಯ್ಯ ಗೆ ಇನ್ನೂ ಕ್ಷೇತ್ರವೇ ಸಿಗುತ್ತಿಲ್ಲ ಅನ್ನೋದು ಬಹಳ ದುಃಖದ ಸಂಗತಿ. ಎಷ್ಟು ಸಲ ಬಜೆಟ್ ಮಂಡನೆ ಮಾಡಿದವರು ಸಿದ್ದರಾಮಯ್ಯ. ಅಂತವರಿಗೆ ಇನ್ನೂ ಒಂದು ಕ್ಷೇತ್ರವೇ ಹುಡುಕಿಕೊಳ್ಳಲು ಆಗ್ತಿಲ್ವಲ್ಲ. ಚಾಮುಂಡೇಶ್ವರಿ ಸೋತ ಮೇಲೆ ಅಲ್ಲಿಂದ ಇಲ್ಲಿಗೆ ಓಡಬೇಕಾಯ್ತು. ಈಗ ನೋಡಿದರೆ ಬದಾಮಿ ದೂರ ಆಗತ್ತೆ ಅಂತಿದ್ದಾರೆ. ಯಾವಾಗಲೂ ಹೆಲಿಕಾಪ್ಟರ್ ನಲ್ಲಿ ಓಡಾಡುವವರು ಅವರು, ಅವರಿಗೆ ಯಾವ ದೂರ? ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!