Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂಗಳಿಗೆ ಬೆದರಿಕೆ ಪತ್ರ : ಕ್ಷಮೆ ಕೇಳಲು ಪತ್ರದಲ್ಲಿ ಉಲ್ಲೇಖ

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ, ಪರಿಷತ್ ವಿಪಕ್ಷ ಬಿ.ಕೆ ಹರಿಪ್ರಸಾದ್ ಗೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಸಾಹಿತಿ ಬಿ.ಎಲ್ ವೇಣು ಅವರಿಗೆ ಬರೆದ ಪತ್ರದಲ್ಲಿ ಮಾಜಿ ಸಿಎಂಗಳ ಹೆಸರು ಉಲ್ಲೇಖವಾಗಿದೆ.

 

ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಕಾರ ಗಲ್ಲಿಗೇರಿಸಬೇಕು ಅಥವಾ ಗುಂಡಿಕ್ಕಿ ಹೊಡೆಯಬೇಕು ಎಂದೂ ಉಲ್ಲೇಖ ಮಾಡಲಾಗಿದೆ. ಅನಾಮಧೇಯ ವ್ಯಕ್ತಿಯಿಂದ ಕೈ ಬರಹದಲ್ಲಿ ಬರೆದ ಬೆದರಿಕೆ ಪತ್ರ ಇದಾಗಿದೆ. ಸಾವರ್ಕರ್ ಕುರಿತು ನೀಡಿದ ಹಗುರ ಮಾತಿಗೆ ಕ್ಷಮೆ ಕೇಳಬೇಕು ಎಂದು‌ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಸಾವರ್ಕರ್ ಬಗ್ಗೆ‌ ನೀವು ಹೀಯಾಳಿಸಿ ಮಾತನಾಡಿದ್ದು ನಿಮಗೆ ಶೋಭೆ ತರಲ್ಲ. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು 5 ನೇ ತರಗತಿ ಪಠ್ಯದಲ್ಲಿ ಹಲವಾರು ವಿಷಯ ತೆಗೆದಿದ್ದಾರೆ. ಬರಗೂರು ಅವರಿಗೆ ಬೆಂಬಲಿಸುವ ಬಿ.ಎಲ್ ವೇಣು ಸೇರಿದಂತೆ 61 ಸಾಹಿತಿಗಳನ್ನ ಏನೂ ಮಾಡಬೇಕು?. ಪಠ್ಯದಲ್ಲಿ ಭಗವದ್ಗೀತೆ ಅಂಶ ಸೇರಿಸದಂತೆ ಎಲ್ಲರೂ ಸರ್ಕಾರಕ್ಕೆ ಪತ್ರ ನೀಡಿದ್ದರು. BL ವೇಣು ಅವರೇ ಇಂಥವರಿಗೆ ನೀವು ಬುದ್ದಿ ಹೇಳಿ, ಇಲ್ಲ ಕಾಲನ ಉಪಚಾರಕ್ಕೆ ಸಿದ್ದರಾಗಿ ಎಂದು ಬೆದರಿಕೆ ಒಡ್ಡಿದ್ದು, ಅಂಚೆ ಮೂಲಕ ಕಾದಂಬರಿಕಾರ BL ವೇಣು ಅವರಿಗೆ ಪತ್ರ ರವಾನೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!