Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 15 ರಿಂದ ಕರ್ನಾಟಕ ಜನ ಚೈತನ್ಯಯಾತ್ರೆ ಪುನರಾರಂಭ : ಜಿಲ್ಲಾಧ್ಯಕ್ಷ ಮಹೇಶ ಸಿ ನಗರಂಗೆರೆ

Facebook
Twitter
Telegram
WhatsApp

ಚಿತ್ರದುರ್ಗ, (ಜು.14) : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರಾಜ್ಯಾದ್ಯಂತ ನಡೆಸುತ್ತಿರುವ ಕರ್ನಾಟಕ ಜನ ಚೈತನ್ಯಯಾತ್ರೆಯ ಮುಂದುವರೆದ ಭಾಗವಾಗಿ ಇದೇ ಜುಲೈ 15 ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಪುನರಾರಂಭವಾಗಲಿದೆ ಎಂದು ಕರ್ನಾಟ ರಾಷ್ಟ್ರ ಸಮಿತಿ ಪಕ್ಷದ ಚಿತ್ರದುರ್ಗ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಮಹೇಶ ಸಿ ನಗರಂಗೆರೆ ಹೇಳಿದರು.

1980ರ ಜುಲೈ 21ರಂದು ನರಗುಂದ ಮತ್ತು ನವಲಗುಂದದಲ್ಲಿ ನಡೆದ ಗಲಭೆ, ಹೋರಾಟ, ಹಿಂಸಾಚಾರಕ್ಕೆ ಪೊಲೀಸರೂ ಸೇರಿದಂತೆ ಹಲವು ರೈತರು ಬಲಿಯಾದರು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದ ಜುಲೈ ಇಪ್ಪತ್ತೊಂದನ್ನು ರಾಜ್ಯದಲ್ಲಿ “ರೈತ ಹುತಾತ್ಮ ದಿನ” ಎಂದು ಆಚರಿಸಲಾಗುತ್ತಿದ್ದು, ಈ ವರ್ಷದ ರೈತ ಹುತಾತ್ಮ ದಿನಾಚರಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಪಾಲ್ಗೊಳ್ಳಲಿದೆ ಮತ್ತು ಏಖS ಪಕ್ಷದ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿಯವರ ನೇತೃತ್ವದಲ್ಲಿ ನರಗುಂದ ಮತ್ತು ನವಲಗುಂದದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ತಿಳಿಸಿದರು.

ಸರ್ಕಾರಿ ಅಧಿಕಾರಿಗಳ ಲಂಚಕೋರತನ ಮತ್ತು ಕಿರುಕುಳವನ್ನು ಬಡವರು ಪ್ರಶ್ನಿಸಲು ಸಾಧ್ಯವೇ ಇಲ್ಲ ಮತ್ತು ಪೊಲೀಸರ ದೌರ್ಜನ್ಯ, ಹಿಂಸೆ, ಭ್ರಷ್ಟಾಚಾರವನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವಂತಹ ಅಸಹಾಯಕ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಒಂದು ಆಶಾಕಿರಣವಾಗಿ ಮೂಡಿಬಂದಿದೆ. ಜನರಲ್ಲಿ ಪ್ರಶ್ನಿಸುವ ಮನೋಭಾವ ಮತ್ತು ಸ್ಥೈರ್ಯವನ್ನು ಮೂಡಿಸುವ ಮೂಲಕ ಸ್ವಚ್ಚ, ಪ್ರಾಮಾಣಿಕ, ಜನಪರ ಮತ್ತು ಪ್ರಾದೇಶಿಕ ರಾಜಕಾರಣದ ಅಗತ್ಯತೆಯನ್ನು ಮನಗಾಣಿಸುತ್ತಾ, 15 ರಂದು ಚಳ್ಳಕೆರೆಯಿಂದ ಪುನರ್ ಪ್ರಾರಂಭಗೊಳ್ಳವ ಕರ್ನಾಟಕ ಜನ ಚೈತನ್ಯಯಾತ್ರೆಯ ಮುಂದಿನ 16 ದಿನಗಳ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಯಾತ್ರೆ ಸಾಗಲಿದ್ದು, 16 ರಂದು ದಾವಣಗೆರೆ ಜಿಲ್ಲೆ, 17 ಮತ್ತು 18 ರಂದು ಹಾವೇರಿ ಜಿಲ್ಲೆ, 19 ರಂದು ಧಾರವಾಡ ಜಿಲ್ಲೆ, 20 ರಂದು ಬೆಳಗಾವಿ ಜಿಲ್ಲೆ, 21 ರ ರೈತ ಹುತಾತ್ಮ ದಿನಾಚರಣೆಯಂದು ನರಗುಂದ-ನವಲಗುಂದದಲ್ಲಿ ಯಾತ್ರೆ ಕಾರ್ಯಕ್ರಮ ನಡೆಸಲಿದೆ ಎಂದರು.

22 ರಂದು ಬಾಗಲಕೋಟೆ ಜಿಲ್ಲೆ, 23 ಮತ್ತು 24 ರಂದು ವಿಜಯಪುರ, ಬೀದರ್ ಜಿಲ್ಲೆ, 25 ರಂದು ಕಲಬುರಗಿ,ಯಾದಗಿರಿ ಜಿಲ್ಲೆ, 26 ಮತ್ತು 27 ರಂದು  ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ 28,29,30 ರಂದು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಸಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚಳ್ಳಕೆರೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ನಾಗಿರೆಡ್ಡಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!