Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದು ವ್ಯಕ್ತಿಪೂಜೆ ಅಲ್ಲ, ಸಿದ್ದರಾಮಯ್ಯ ಹುಟ್ಟುಹಬ್ಬ : ಡಿಕೆಶಿಗೆ ಉತ್ತರ ಕೊಟ್ಟರಾ ಎಂ ಬಿ ಪಾಟೀಲ್..?

Facebook
Twitter
Telegram
WhatsApp

 

ಬೆಂಗಳೂರು: ಸಂತೋಷ ಪಾಟೀಲ್ ಪತ್ನಿ ರಾಜ್ಯಪಾಲರಿಗೆ ದೂರು ನೀಡಿದ ವಿಚಾರಕ್ಕೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಸಹಜವಾಗಿಯೆ ಇಂತಹ ಪ್ರಕರಣದ ತನಿಖೆ ಆಗಬೇಕು. ಆದ್ರೆ ಸರ್ಕಾರ ಮುಚ್ಚುವ ಪ್ರಯತ್ನ ಮಾಡುತ್ತಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ತನಿಖೆ ಆಗಬೇಕಿತ್ತು. ಈಶ್ವರಪ್ಪ ಮೇಲೆ ತನಿಖೆ ಆಗಬೇಕಿತ್ತು. ಈಗ ಸಂತೋಷ ಪತ್ನಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಜ್ಯಪಾಲರು ಅವರಿಗೆ ನ್ಯಾಯ ನೀಡುವ ಕೆಲಸ ಮಾಡ್ತಾರೆ. ರಾಜ್ಯಪಾಲರಿಗೆ ನ್ಯಾಯ ಕೊಡಿಸ್ತಾರೆ ಅಂತ ವಿಶ್ವಾಸ ಇದೆ ಎಂದಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂಬ ವರದಿ ವಿಚಾರಕ್ಕೆ ಮಾತನಾಡಿದ ಎಂ ಬಿ ಪಾಟೀಲ್, ಎಕ್ಸಪರ್ಟ್ ನ್ಯೂಟ್ರಿಸಿಯನ್ ಇದ್ದಾರೆ. ಅವರ ಅಭಿಪ್ರಾಯ ಸರ್ಕಾರ ಪಡೆಯಬೇಕು. ನಾವು ಸಣ್ಣವರಿದ್ದಾಗನಿಂದ ಹಾಲು ಕುಡಿದು ಬೆಳದಿದ್ದೇವೆ. ಈಗ ಹಾಲು ಮೊಟ್ಟೆ ಕೊಡಬಾರದು ಅನ್ನುವುದು ಅವೈಜ್ಞಾನಿಕ. ಬಿಜೆಪಿ ಅಜೆಂಡಾ ಜಾರಿಗೆ ಸರ್ಕಾರ ಹೊರಟಿದೆ. ಆಹಾರ ಪದ್ದತಿ ವಿಚಾರ ತಜ್ಞರು ಅಭಿಪ್ರಾಯ ಪಡೆಯಬೇಕು. ಸರ್ಕಾರ ಮನಸ್ಸಿಗೆ ಬಂದ ಹಾಗೆ ವರದಿ ಜಾರಿ ಮಾಡಬಾರದು. ಇದು ಇನ್ನೊಂದು ಚಕ್ರತೀರ್ಥ ಕಥೆಯಾಗುತ್ತೆ ಎಂದು ಸರ್ಕಾರಕ್ಕೆ ಎಂ ಬಿ ಪಾಟೀಲ್ ಸಲಹೆ ನೀಡಿದ್ದಾರೆ.

 

ಸಿದ್ದರಾಮಯ್ಯರ ೭೫ನೇ ಹುಟ್ಟುಹಬ್ಬವನ್ನ ಎಲ್ಲರೂ ಒಗ್ಗಟ್ಟಿನಿಂದ ಆಚರಿಸಲಾಗುತ್ತಿದ್ದೇವೆ. ರಾಹುಲ್ ಗಾಂಧಿ ಕೂಡ ಭಾಗವಹಿಸುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಪೂರ್ವಭಾವಿ ಸಭೆಗೆ ಭಾಗಿಯಾಗಬೇಕಾದ ಅಗತ್ಯ ಇರಲಿಲ್ಲ. ಈಗಾಗಲೇ ಅವರು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಿದ್ದಾರೆ. ಸಿದ್ದರಾಮಯ್ಯ ಸಮಿತಿಯಿಂದ ಕಾರ್ಯಕ್ರಮ ಆಯೋಜನೆ ಆಗಿದೆ. ಕಾಂಗ್ರೆಸ್ ಪಕ್ಷ ಪೂರ್ತಿಯಾಗಿ ಇದರಲ್ಲಿ ಭಾಗಿಯಾಗುತ್ತೆ. ಇದು ಕಾಂಗ್ರೆಸ್ ಕಾರ್ಯಕ್ರಮ. ವ್ಯಕ್ತಿ ಪೂಜೆ ಮಾಡುತ್ತಿಲ್ಲ, ಸಿದ್ದರಾಮಯ್ಯ ಹುಟ್ಟುಹಬ್ಬ. ಇಲ್ಲಿ ಮಧುಮಗ ಅಂದ್ರೆ ಸಿದ್ದರಾಮಯ್ಯ. ಹಾಗಾಗಿ ಕಾರ್ಯಕ್ರಮದಲ್ಲಿ ಮುಖ್ಯವಾಗಿರ್ತಾರೆ. ಡಿ ಕೆ ಶಿವಕುಮಾರ್ ಕೂಡ ೭೫ ವರ್ಷಕ್ಕೆ ಕಾರ್ಯಕ್ರಮ ‌ಮಾಡಲಿ. ನನಗೂ ೭೫ ವರ್ಷ ಆದಾಗ ಕಾರ್ಯಕ್ರಮ ಮಾಡೋಣ. ಈಗ ಅರವತ್ತು ವರ್ಷ ತುಂಬಿದೆ, ಸಷ್ಠಿಪೂರ್ತಿ ಮಾಡಿಕೊಳ್ಳಲಿ. ನಾವೆಲ್ಲ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇವೆ. ಇದರಲ್ಲಿ ಯಾವುದೇ ಕಾರ್ಯಕ್ರಮ ತಪ್ಪಿಲ್ಲ ಎಂದಿದ್ದಾರೆ.

ಮಳೆ ಸಂದರ್ಭದಲ್ಲಿ ಬಿಜೆಪಿ ಚಿಂತನ ಮಂಥನ ವಿಚಾರ, ಬಿಜೆಪಿಗೆ ಸೋಲಿನ ಭೀತಿ ಆರಂಭ ಆಗಿದೆ. ಹಾಗಾಗಿ ಚಿಂತನ ಮಂಥನ ಸಭೆ ಮಾಡ್ತಾ ಇದ್ದಾರೆ. ಜನರ ಸಮಸ್ಯೆ ಬಿಜೆಪಿಗೆ ಬೇಕಿಲ್ಲ. ಈಗಾಗಲೇ ಬಿಜೆಪಿ ಸೋಲುತ್ತೆ ಅಂತ ಆಂತರಿಕ ವರದಿ ಬಂದಿದೆ. ಆದರಿಂದ ಗೆಲ್ಲವುದರ ಬಗ್ಗೆ ಸಭೆ ಮಾಡುತ್ತಿದ್ದಾರೆ. ಆದ್ರೆ ಈಗ ಸಭೆ ಮಾಡಿ ಯಾವುದೇ ಪ್ರಯೋಜನ ಇಲ್ಲ. ಪ್ರವಾಹ ಪೀಡಿತ ಸ್ಥಳಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಕಳೆದ ಬಾರಿ ಪ್ರವಾಹಕ್ಕೆ ಪರಿಹಾರ ಸಿಕ್ಕಿಲ್ಲ. ಮಾಧ್ಯಮಗಳು ಬೇಕಾದ್ರೆ ಕ್ರಾಸ್ ಚೆಕ್ ಮಾಡಿ. ಪರಿಹಾರ ಕಣ್ಣೋರಿಸುವ ತಂತ್ರ ಆಗಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!